ಬ್ರೇಕಿಂಗ್ ನ್ಯೂಸ್
02-01-21 08:11 pm Mangaluru Correspondent ಕರಾವಳಿ
ಮಂಗಳೂರು, ಜ.2: ಬಿಜೆಪಿ ಪಕ್ಷದ ಬಗ್ಗೆ ಟೀಕಿಸಿ ಬರೆದಿದ್ದ ಮಹಿಳೆಯೊಬ್ಬರನ್ನು ಅವಾಚ್ಯವಾಗಿ ನಿಂದಿಸಿ, ಗ್ಯಾಂಗ್ ರೇಪ್ ಮಾಡಬೇಕು ಎಂದು ಫೇಸ್ಬುಕ್ ನಲ್ಲಿ ಕರೆ ಕೊಟ್ಟ ವಿಚಾರದ ಬಗ್ಗೆ ಮಂಗಳೂರಿನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯ ಕಾರ್ಯಕರ್ತೆ ಆಗಿರುವ ಮಂಗಳೂರಿನ ಮಹಿಳೆಯೊಬ್ಬರು, ಫೇಸ್ಬುಕ್ ನಲ್ಲಿ ಬಿಜೆಪಿ ಪಕ್ಷದ ಕುರಿತ ಪರ- ವಿರೋಧ ಚರ್ಚೆಯಲ್ಲಿ ತನ್ನ ಅಭಿಪ್ರಾಯ ಹಾಕಿದ್ದರು. ಎಸ್ ಡಿಪಿಐ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ ಕೇಳಿಬಂದಿದ್ದ ಹಿನ್ನೆಲೆ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರಕಾರ ಇರುವಾಗ ಎಸ್ ಡಿಪಿಐಯನ್ನು ನಿಷೇಧ ಯಾಕೆ ಮಾಡಿಲ್ಲ. ಬಿಜೆಪಿಯವರ ಕುತಂತ್ರಕ್ಕೆ ಎಸ್ ಡಿಪಿಐ ಬೇಕು, ಇದರಿಂದ ಅವರಿಗೆ ಲಾಭ ಇದೆ ಎಂದು ಟೀಕಿಸಿದ್ದರು.


ಚರ್ಚೆಯಲ್ಲಿ ಮಹಿಳೆ ತನ್ನ ಅಭಿಪ್ರಾಯ ಹೇಳಿಕೊಂಡಿದ್ದರು ಅಷ್ಟೇ. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ ಬಾಬುರಾವ್ ಸರ್ದೇಸಾಯಿ ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ವ್ಯಕ್ತಿ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದಿಸಿದ್ದಾನೆ. ಅಲ್ಲದೆ, ಇನ್ನಿತರ ತನ್ನ ಸ್ನೇಹಿತರಿಗೆ ಈಕೆಯನ್ನು ಸಾಮೂಹಿಕ ಅತ್ಯಾಚಾರ ಮಾಡಬೇಕೆಂದು ಹೇಳಿದ್ದಾನೆ. ಈ ಬಗ್ಗೆ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಆತನಿಗೆ ಟ್ಯಾಗ್ ಮಾಡಿ ಬರೆದಿದ್ದು ಪ್ರಧಾನಿ ಮೋದಿಯನ್ನು ಅನುಸರಿಸುವ ಮಂದಿ ಇಷ್ಟು ಕೀಳು ಮಟ್ಟಕ್ಕೆ ಇಳಿಯಬಾರದು ಎಂದಿದ್ದಾರೆ.
ಬಾಬುರಾವ್ ಸರ್ದೇಸಾಯಿ ಬಿಜೆಪಿ ಕಾರ್ಯಕರ್ತನೇ, ಮೋದಿ ಅಭಿಮಾನಿಯೇ, ತಾನು ಎಲ್ಲಿಯವನು ಎಂಬ ಬಗ್ಗೆ ಪ್ರೊಫೈಲ್ ನಲ್ಲಿ ಹಾಕಿಕೊಂಡಿಲ್ಲ. ಈ ವಿಚಾರದ ಬಗ್ಗೆ ಮುನೀರ್ ಕಾಟಿಪಳ್ಳ ಮತ್ತು ಸ್ನೇಹಿತರು ಮಹಿಳೆಯ ಜೊತೆ ಸೇರಿ ಮಂಗಳೂರಿನ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
Social Activist of Mangalore Threatened of Gang Rape on social media for sharing her political view on BJP party. A case has been filed at the Cybercrime police station.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm