ಬ್ರೇಕಿಂಗ್ ನ್ಯೂಸ್
19-03-26 01:05 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 19: ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯ ನೆಪದಲ್ಲಿ ಕೋಳಿ ಅಂಕ ನಡೆಸಿದ್ದು ಪೊಲೀಸರು ದಾಳಿ ನಡೆಸಿ ಆರು ಜನರನ್ನು ಬಂಧಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿರುದ್ಧವೂ ಕೇಸು ದಾಖಲಿಸಿದ್ದಾರೆ.
ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಎಂಬವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೂಂಡು ಕೋಳಿಗಳಿಗೆ ಹರಿತವಾದ ಕತ್ತಿಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ದಾಳಿ ನಡೆಸಿದ ಪೊಲೀಸರು ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಆರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ. ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಸುಧೀರ್ ರೆಡ್ಡಿ, ಜಾತ್ರೆಯ ಸಂಪ್ರದಾಯ ಎಂದು ಒಂದು ದಿನ ಕೋಳಿ ಅಂಕ ನಡೆಸಲು ಬಿಡಲಾಗಿತ್ತು. ಆನಂತರವೂ ಕೋಳಿ ಅಂಕ ನಡೆಸುವುದು ಜೂಜಿನ ಸಂಸ್ಕೃತಿಯಾಗುತ್ತದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಣ ಪಣಕ್ಕಿಟ್ಟು ಮತ್ತೆ ಅದನ್ನೇ ಮುಂದುವರಿಸುವುದು ಸಂಪ್ರದಾಯ ಪಾಲನೆ ಆಗುವುದಿಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am