ಬ್ರೇಕಿಂಗ್ ನ್ಯೂಸ್
19-03-26 01:05 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 19: ಮೂಡುಬಿದರೆ ಪೊಲೀಸ್ ಠಾಣಾ ಸರಹದ್ದಿನ ಮೂಡುಮೂರ್ನಾಡು ಗ್ರಾಮದ ಹೊಯಿಪಾಲಬೆಟ್ಟು ಎಂಬಲ್ಲಿ ಕೋಡಮಣಿತ್ತಾಯ ಹಾಗೂ ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆಯ ನೆಪದಲ್ಲಿ ಕೋಳಿ ಅಂಕ ನಡೆಸಿದ್ದು ಪೊಲೀಸರು ದಾಳಿ ನಡೆಸಿ ಆರು ಜನರನ್ನು ಬಂಧಿಸಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿರುದ್ಧವೂ ಕೇಸು ದಾಖಲಿಸಿದ್ದಾರೆ.
ರಾಜೇಂದ್ರ ಪೂಜಾರಿ ಹಾಗೂ ರಾಜೇಶ್ ಬಲ್ಲಾಳ್ ಎಂಬವರ ನೇತೃತ್ವದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಸೇರಿಕೂಂಡು ಕೋಳಿಗಳಿಗೆ ಹರಿತವಾದ ಕತ್ತಿಗಳನ್ನು ಕಟ್ಟಿ ಹಿಂಸಾತ್ಮಕವಾಗಿ ಕಾದಾಡಲು ಬಿಟ್ಟು ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದರು. ದಾಳಿ ನಡೆಸಿದ ಪೊಲೀಸರು ಕೋಳಿ ಅಂಕದಲ್ಲಿ ನಿರತರಾಗಿದ್ದ 6 ಜನ ಆರೋಪಿಗಳನ್ನು ಹಾಗೂ ಕೋಳಿ ಅಂಕದಲ್ಲಿ ಪಣಕ್ಕಿಟ್ಟಿದ್ದ 1480/- ರೂ. ಹಣವನ್ನು ಹಾಗೂ 17 ಜೀವಂತ ಹುಂಜಗಳು ಮತ್ತು ಕೋಳಿ ಅಂಕಕ್ಕೆ ಬಳಸುವ ಎರಡು ಬಾಳ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ದೈವಸ್ದಾನದ ವ್ಯವಸ್ದಾಪನಾ ಸಮಿತಿ ಹಾಗೂ ಆರೋಪಿಗಳ ಮೇಲೆ ಮೂಡಬಿದ್ರೆ ಪೊಲೀಸ್ ಠಾಣಾ ಅ ಕ್ರ 30/2026 ಕಲಂ 189(2), 193 ಜೊತೆಗೆ 190 ಬಿ ಎನ್ ಎಸ್ ಮತ್ತು 87, 93 ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 11(1)(ಟಿ) ಪ್ರಾಣಿ ಹಿಂಸಾ ಪ್ರತಿಬಂಧಕ ಕಾಯ್ದೆ 1960 ರಂತೆ ಪ್ರಕರಣ ದಾಖಲಿಸಿದ್ದಾರೆ.

ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಮಿಷನರ್ ಸುಧೀರ್ ರೆಡ್ಡಿ, ಜಾತ್ರೆಯ ಸಂಪ್ರದಾಯ ಎಂದು ಒಂದು ದಿನ ಕೋಳಿ ಅಂಕ ನಡೆಸಲು ಬಿಡಲಾಗಿತ್ತು. ಆನಂತರವೂ ಕೋಳಿ ಅಂಕ ನಡೆಸುವುದು ಜೂಜಿನ ಸಂಸ್ಕೃತಿಯಾಗುತ್ತದೆ. ಇದಕ್ಕೆ ನಾವು ಅವಕಾಶ ನೀಡುವುದಿಲ್ಲ. ಹಣ ಪಣಕ್ಕಿಟ್ಟು ಮತ್ತೆ ಅದನ್ನೇ ಮುಂದುವರಿಸುವುದು ಸಂಪ್ರದಾಯ ಪಾಲನೆ ಆಗುವುದಿಲ್ಲ. ಕಾನೂನು ತನ್ನ ಕೆಲಸ ಮಾಡುತ್ತದೆ ಎಂದು ಹೇಳಿದ್ದಾರೆ.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm