ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm