ಬ್ರೇಕಿಂಗ್ ನ್ಯೂಸ್
19-03-26 05:27 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 19 : ಧರ್ಮಸ್ಥಳದಲ್ಲಿ 1990ರಿಂದ 2021ರ ವರೆಗೆ ನಡೆದಿದೆ ಎನ್ನಲಾದ 74 ಅಸಹಜ ಸಾವುಗಳ ಪ್ರಕರಣ ಸಂಬಂಧಿಸಿ ಪೋಸ್ಟ್ ಮಾರ್ಟಂ ವರದಿ ಸೇರಿದಂತೆ ಸಮಗ್ರ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ತಾಯಿ ಕುಸುಮಾವತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಡಿ ಹಳೆ ಪ್ರಕರಣಗಳಲ್ಲಿ ಹೊಸತಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕೆಂಬ ದೂರಿಗೆ ಸಂಬಂಧಿಸಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಎಸ್. ಬಾಲನ್, “74 ಅಸಹಜ ಸಾವುಗಳ ಪ್ರಕರಣಗಳಲ್ಲಿ ಸರಿಯಾದ ಪಂಚನಾಮೆ ನಡೆಸಿಲ್ಲ. ಮರಣೋತ್ತರ ಪರೀಕ್ಷೆ ಮಾಡದೇ ಶವ ಸಂಸ್ಕಾರ ಮಾಡಲಾಗಿದೆ. ಲಾಡ್ಜ್ ನಲ್ಲಿ ಸಿಕ್ಕಿದ್ದ ಶವಗಳ ಬಗ್ಗೆ ವಾರೀಸುದಾರರ ತಿಳಿಯುವ ಯತ್ನ ಮಾಡಿಲ್ಲ. ಈ ಎಲ್ಲ ಪ್ರಕರಣಗಳಲ್ಲಿ ಹೊಸದಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು” ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ, “ಈ ಪ್ರಕರಣಗಳು ಹಳೆಯವು. ಈಗಾಗಲೇ ಯುಡಿಆರ್ ದಾಖಲಾಗಿದೆ. ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು” ಎಂದು ತಿಳಿಸಿದರು. ವಿಚಾರಣೆ ವೇಳೆ ಹಲವು ಪ್ರಕರಣಗಳಲ್ಲಿ ಮಹಿಳೆಯರು ನಾಪತ್ತೆಯಾಗಿದ್ದು, ತನಿಖೆ ನಡೆದಿಲ್ಲ ಎಂಬ ವಿಚಾರವನ್ನೂ ಕೋರ್ಟ್ ಗಮನಕ್ಕೆ ತಂದರು. ಶವಗಳ ಸಂಸ್ಕಾರ ಪ್ರಕ್ರಿಯೆಯಲ್ಲೂ ಗಂಭೀರ ಲೋಪಗಳಿರುವುದಾಗಿ ಅರ್ಜಿದಾರ ವಕೀಲರು ಆಕ್ಷೇಪಿಸಿದರು.
ಅನಾಥ ಶವ ಪತ್ತೆಗೆ ಯಾವ ಕ್ರಮ ಕೈಗೊಂಡಿದ್ದೀರಿ, ಎಲ್ಲ ಪ್ರಕರಣಗಳಲ್ಲಿ ಪೋಸ್ಟ್ ಮಾರ್ಟಂ ವರದಿ ಇರಿಸಿದ್ದೀರಾ ಎಂದು ಕೇಳಿದ ನ್ಯಾಯಾಧೀಶರು, ಎಲ್ಲ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am