ಬ್ರೇಕಿಂಗ್ ನ್ಯೂಸ್
19-03-26 11:30 pm HK News Desk ಕರಾವಳಿ
ಮಂಗಳೂರು, ಮಾರ್ಚ್ 19: ಮಾರ್ಚ್ 19ರ ಗುರುವಾರ ಸಂಜೆಯೇ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಭಾಗದಲ್ಲಿ ಚಂದ್ರದರ್ಶನ ಆಗಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಫಿತರ್ ಮಾರ್ಚ್ 20ರ ಶುಕ್ರವಾರವೇ ನಡೆಯಲಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬದ ಸಾರ್ವತ್ರಿಕ ರಜೆಯನ್ನು ಶುಕ್ರವಾರವೇ ನೀಡಲಾಗಿದೆ.
ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಆದೇಶಿಸಿದ್ದಾರೆ. ಒಂದು ತಿಂಗಳ ಕಾಲ ರಂಜಾನ್ ಉಪವಾಸದ ಬಳಿಕ ಕೊನೆಯ ದಿನವನ್ನು ಈದುಲ್ ಫಿತರ್ ಎಂದು ಆಚರಿಸಲಾಗುತ್ತದೆ. ಮುಸ್ಲಿಮರು ಇದನ್ನು ಸಂಭ್ರಮದ ದಿನವಾಗಿ ಆಚರಿಸುತ್ತಾರೆ.
ಕರ್ನಾಟಕದ ಇತರೇ ಭಾಗದಲ್ಲಿ ಈ ಹಬ್ಬವನ್ನು ಶನಿವಾರ ಮಾರ್ಚ್ 21ರಂದೇ ಆಚರಣೆ ಮಾಡಲಾಗುತ್ತದೆ. ಆದರೆ ದಕ್ಷಿಣ ಕನ್ನಡ ಖಾಜಿಯವರು ಕೇರಳದ ಆಚರಣಾ ಪದ್ಧತಿಯನ್ನು ಅನುಸರಿಸುವುದಲ್ಲದೆ, ಕೇರಳಕ್ಕೆ ಹತ್ತಿರ ಇರುವುದರಿಂದ ಚಂದ್ರ ದರ್ಶನ ಆಗಿರುವುದನ್ನು ಘೋಷಿಸುತ್ತಾರೆ. ಇದರಂತೆ, ಕರಾವಳಿ ಭಾಗದ ಮುಸ್ಲಿಂ ಸಮುದಾಯದ ಜನರು ಶುಕ್ರವಾರವೇ ಹಬ್ಬದ ಆಚರಣೆ ಮಾಡುತ್ತಾರೆ. ಇದರಂತೆ, ಹಬ್ಬದ ಆಚರಣೆಗೆ ಅನುವಾಗುವಂತೆ ಶಾಲೆ, ಕಾಲೇಜುಗಳಿಗೆ ಶುಕ್ರವಾರವೇ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 10:04 pm
HK News Staffer
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm