ಬ್ರೇಕಿಂಗ್ ನ್ಯೂಸ್
20-03-26 06:56 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 20: ಮೂಡಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಕೇಳಿಬಂದಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಎಸಿಪಿ ನೇತೃತ್ವದಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಲೈಂಗಿಕ ದೌರ್ಜನ್ಯ ಕುರಿತಾಗಿ ಯಾವುದೇ ಸಾಕ್ಷ್ಯಗಳು ಲಭಿಸಿಲ್ಲ ಎನ್ನಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಹಿಳಾ ಆಯೋಗಕ್ಕೆ ನೀಡಿರುವ ದೂರಿಗೆ ಸಂಬಂಧಿಸಿದಂತೆ ಯಾವುದೇ ಲೈಂಗಿಕ ದೌರ್ಜನ್ಯದ ಸಾಕ್ಷ್ಯಗಳು ಲಭಿಸಿಲ್ಲ ಎಂದಿದ್ದಾರೆ.
ಆಡಿಯೋ ಮತ್ತು ವಿಡಿಯೋದಲ್ಲಿ ಇನ್ಸ್ ಪೆಕ್ಟರ್ ವರ್ತನೆ ಆಕ್ಷೇಪಾರ್ಹ, ದುರ್ನಡತೆಯಿಂದ ಕೂಡಿರುವಂಥದ್ದು. ಅದಕ್ಕೆ ಆತ ಬೆಲೆ ತೆರಬೇಕಾಗುತ್ತದೆ. ಆದರೆ ಈ ಆಡಿಯೋ ಅಥವಾ ವಿಡಿಯೋದಲ್ಲಿರುವವರು ಸುಮತಿ ನಾಯಕ್ ಆಗಲೀ, ಅವಿತಾ ಮಿನೇಜಸ್ ಆಗಲೀ ಅಲ್ಲ. ಯಾರು ಅದರಲ್ಲಿದ್ದಾರೋ ಅವರನ್ನು ತನಿಖೆಗೆ ಒಳಪಡಿಸಿದ್ದು ಅವರು ದೂರು ನೀಡಲು ನಿರಾಕರಿಸಿದ್ದಾರೆ. ಆದರೆ ಈ ಆಡಿಯೋ, ವಿಡಿಯೋಗಳನ್ನು ಮುಂದಿಟ್ಟು ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ದೂರು ನೀಡಿರುವುದು ದುರುದ್ದೇಶದಿಂದ ಕೂಡಿದೆ ಎಂದು ರೆಡ್ಡಿ ಹೇಳಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪಗಳು ಸುಳ್ಳಾದರೂ, ಇನ್ಸ್ ಪೆಕ್ಟರ್ ಆಡಿಯೋ, ವಿಡಿಯೋದಲ್ಲಿ ಅಸಭ್ಯವಾಗಿ ಕಾಣಿಸಿಕೊಂಡಿದ್ದಕ್ಕೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಅದಕ್ಕಾಗಿ ಈಗಾಗಲೇ ಅಮಾನತು ಕ್ರಮ ಜರುಗಿಸಲಾಗಿದೆ. ಕೆಲವು ಎಡವಟ್ಟು, ಹಳೆಯ ತಪ್ಪುಗಳಿಂದಾಗಿ ಅವರ ಮೇಲೆ ಸುಳ್ಳು ಆರೋಪಗಳು ಕೇಳಿಬಂದಿದೆ. ಈ ರೀತಿಯ ತಪ್ಪುಗಳು ಮಾಡಿಲ್ಲದೇ ಇರುತ್ತಿದ್ದರೆ ಇಂತಹ ಆಡಿಯೋ, ವಿಡಿಯೋಗಳು ಮುನ್ನೆಲೆಗೆ ಬರುತ್ತಿರಲಿಲ್ಲ. ಈ ತಪ್ಪುಗಳಿಗಾಗಿ ಬೆಲೆ ತೆರಲೇಬೇಕಾಗುತ್ತದೆ ಎಂದು ಹೇಳಿರುವ ಸುಧೀರ್ ರೆಡ್ಡಿ, ಇಲಾಖೆಯಲ್ಲಿ ಇಂತಹ ದುರ್ನಡತೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಠಾಣೆಗೆ ಬರುವ ಮಹಿಳೆಯರ ಜೊತೆಗೆ ವ್ಯವಹರಿಸುವಾಗ ಜಾಗ್ರತೆ ಇರಬೇಕು ಮತ್ತು ಭವಿಷ್ಯದಲ್ಲಿ ಇಂತಹ ವಿಡಿಯೋಗಳು ಬರದಂತೆ ನೋಡಿಕೊಳ್ಳಬೇಕು ಎಂದು ಕಮಿಷನರ್ ಸಹೋದ್ಯೋಗಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Mangaluru Police Commissioner Sudheer Reddy has clarified that the allegations of sexual harassment made against Moodbidri Inspector Sandesh P.G. are false and motivated. According to the Commissioner, a preliminary inquiry conducted under the leadership of an ACP found no evidence to support the claims of sexual harassment. The complaint had been filed with the Women’s Commission by Sumathi Nayak and Avitha Menezes.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am