ಬ್ರೇಕಿಂಗ್ ನ್ಯೂಸ್
20-03-26 07:36 pm HK News Staffer ಕರಾವಳಿ
ಉಡುಪಿ, ಮಾರ್ಚ್ 20: ಹಿಂದು ಜಾಗರಣ ವೇದಿಕೆಯ ಪ್ರತಿಭಟನೆ, ಎಚ್ಚರಿಕೆ ನಡುವೆಯೂ ತಮಿಳುನಾಡು ಮೂಲದ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದ ಪೀಸ್ ಫೆಸ್ಟಿವಲ್ ಹೆಸರಿನ ಮೂರು ದಿನಗಳ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮ ಆರಂಭಗೊಂಡಿದೆ.
ಉಡುಪಿ ನಗರದ ಮಿಷನ್ ಕಂಪೌಂಡಿನಲ್ಲಿ ಮಾರ್ಚ್ 20ರಿಂದ 22ರ ವರೆಗೆ ಕಾರ್ಯಕ್ರಮ ಆಯೋಜಿಸಿದ್ದು, ಇದರ ಹಿಂದೆ ಮತಾಂತರದ ಷಡ್ಯಂತ್ರ ಇದೆ, ಲಾಜರಸ್ ಭಾಗವಹಿಸಲು ಅವಕಾಶ ನೀಡಬಾರದೆಂದು ಹಿಂದು ಜಾಗರಣ ವೇದಿಕೆ ಮುಖಂಡರು ಆಕ್ಷೇಪಿಸಿದ್ದರು. ಅಲ್ಲದೆ, ಜಿಲ್ಲಾಡಳಿತಕ್ಕೂ ಕಾರ್ಯಕ್ರಮಕ್ಕೆ ಅವಕಾಶ ನೀಡದಂತೆ ಒತ್ತಾಯ ಮಾಡಿದ್ದರು.
ಆದರೆ ಕಾರ್ಯಕ್ರಮ ಸಂಘಟಕರು ಹೈಕೋರ್ಟ್ ಮೂಲಕ ಆದೇಶ ತಂದಿದ್ದು, ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಭದ್ರತೆ ನೀಡಬೇಕು ಎನ್ನುವ ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಪೊಲೀಸರು ಕಾರ್ಯಕ್ರಮಕ್ಕೆ ಭದ್ರತೆ ನೀಡಿದ್ದಾರೆ. ತಮಿಳುನಾಡಿನ ಮಿಷನರಿ ಮೋಹನ್ ಲಾಝರಸ್ ಸ್ಥಳಕ್ಕೆ ಆಗಮಿಸಿದ್ದು, ಕಾರ್ಯಕ್ರಮವೂ ಆರಂಭಗೊಂಡಿದೆ. ಇದೇ ವೇಳೆ, ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಶ್ರೀಕಾಂತ್ ಶೆಟ್ಟಿ ಮತ್ತಿತರರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.



ತಮಿಳುನಾಡಿನಲ್ಲಿ ಲಾಝರಸ್ ವಿರುದ್ಧ ಹಲವು ಕೇಸು ದಾಖಲಾಗಿದ್ದು, ಹಿಂದು ವಿರೋಧಿ ಭಾಷಣಕ್ಕಾಗಿ ಕುಖ್ಯಾತಿ ಪಡೆದಿದ್ದಾರೆಂದು ಹಿಂದು ಜಾಗರಣ ವೇದಿಕೆ ಮುಖಂಡರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಂತಿಯಿಂದಿರುವ ಉಡುಪಿಯಲ್ಲಿ ಅಶಾಂತಿ ಸೃಷ್ಟಿಸುವ ಕೆಲಸ ಮಾಡಬೇಡಿ ಎಂದು ಹೇಳಿದ್ದರು. ಇದರಂತೆ, ಪೊಲೀಸರು ಕಾರ್ಯಕ್ರಮ ಸಂಘಟಕರಿಗೆ ನೋಟೀಸ್ ನೀಡಿ, ಲಾಝರಸ್ ಬದಲು ಬೇರೆ ಭಾಷಣಕಾರರನ್ನು ಕರೆಯುವಂತೆ ಸಲಹೆ ಮಾಡಿದ್ದರು. ಆದರೆ ಸಂಘಟಕರು ಹೈಕೋರ್ಟ್ ಮೂಲಕ ಅನುಮತಿ ಪಡೆದು ಕಾರ್ಯಕ್ರಮ ನಡೆಸಿದ್ದಾರೆ.
#Udupi Despite protests by Hindu Jagaran Vedike, the #PeaceFestival led by controversial Tamil Nadu missionary #MohanCLazarus has begun. With permission from the Karnataka High Court, police deployed security as protests led to detentions. pic.twitter.com/Jj309hiXGb
— Headline Karnataka (@hknewsonline) March 20, 2026
Despite strong objections and warnings from the Hindu Jagarana Vedike, a three-day religious event titled “Peace Festival” (Samadhana Mahotsav), led by controversial Tamil Nadu-based missionary Mohan C. Lazarus, commenced in Udupi on Friday. The programme is being held at Mission Compound in the city from March 20 to 22. Leaders of the Hindu Jagarana Vedike had opposed the event, alleging that it was part of a larger conversion agenda.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 07:54 pm
Udupi Staffer
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
ದ.ಕ. ಜಿಲ್ಲೆಯಲ್ಲಿ ಮಾರ್ಚ್ 20ರಂದೇ ಈದುಲ್ ಫಿತರ್ ಹಬ...
19-03-26 11:30 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm