ಬ್ರೇಕಿಂಗ್ ನ್ಯೂಸ್
20-03-26 11:26 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 20: ತೆಂಕುತಿಟ್ಟು ಯಕ್ಷಗಾನದ ಮೇರು ಪ್ರತಿಭೆ, ಸವ್ಯಸಾಚಿ, ದಶಾವತಾರಿ ಎಂದೇ ಖ್ಯಾತರಾಗಿದ್ದ ಸೂರಿಕುಮೇರು ಗೋವಿಂದ ಭಟ್ (88) ಇನ್ನಿಲ್ಲ. ವೀರ ರಸದ ವೇಷಗಳಿಗೆ ಹೊಸ ಕಳೆಯನ್ನು ಮೂಡಿಸಿದ್ದ ಅಭಿನಯ ಚತುರ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋವಿಂದ ಭಟ್ಟರು (88) ತೀರ್ಥಹಳ್ಳಿಯ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರಿಕುಮೇರು ಎಂಬ ಸಣ್ಣ ಗ್ರಾಮದಲ್ಲಿ ಮಾರ್ಚ್ 22, 1938 ರಂದು ಜನಿಸಿದ್ದ ಗೋವಿಂದ ಭಟ್ಟರು ಯಕ್ಷಗಾನದಲ್ಲಿ ಏರಿದ ಎತ್ತರ ಅದ್ವಿತೀಯವಾಗಿತ್ತು. ತಂದೆ ಶಿವರಾಮ ಭಟ್ಟರು ಮತ್ತು ತಾಯಿ ಪಾರ್ವತಿ ಅಮ್ಮ. ಕಡು ಬಡತನದ ನಡುವೆಯೂ ಏಳನೇ ತರಗತಿಯ ವರೆಗೆ ವಿದ್ಯಾಭ್ಯಾಸ. ಓರಗೆಯವರ ಸಂಪರ್ಕ, ಯಕ್ಷಗಾನದ ಮೇಲಿನ ಅಪಾರ ಪ್ರೀತಿಯಿಂದಾಗಿ 13ನೇ ವಯಸ್ಸಿನಲ್ಲಿಯೇ ಬಣ್ಣ ಹಚ್ಚಿ ರಂಗಪ್ರವೇಶ ಮಾಡಿದ್ದರು.

ಧರ್ಮಸ್ಥಳದ ಮೇಳದಲ್ಲಿ 50 ವರ್ಷಗಳಿಗೂ ಹೆಚ್ಚು ಸುದೀರ್ಘ ಕಾಲ ಸೇವೆ ಸಲ್ಲಿಸಿದ ಗೋವಿಂದ ಭಟ್ಟರು ಮೇಳದ ಪರಿಧಿ ಮೀರಿದ ಖ್ಯಾತಿ ಗಳಿಸಿದ್ದರು. ಅತಿಥಿ ಕಲಾವಿದರ ಕೂಡುವಿಕೆಯ ಆಟದಲ್ಲಿ ಗೋವಿಂದ ಭಟ್ಟರು ಇದ್ದಾರೆ ಅಂದ್ರೆ ಅಲ್ಲೊಂದು ಹೆಚ್ಚುಗಾರಿಕೆ ಇತ್ತು. ಮೇಳದ ಶಿಸ್ತು ಮತ್ತು ಸಂಪ್ರದಾಯದ ಕಾವಲುಗಾರನಂತೆ ಪಾತ್ರಕ್ಕೆ ಮೀರದಂತೆ ಕಂಚಿನ ಕಂಠದ ಮಾತುಗಾರಿಕೆ, ಲಯಬದ್ಧ ನಾಟ್ಯ, ತಾಳಮದ್ದಲೆಗಳ ಅರ್ಥಗಾರಿಕೆ ಅವರನ್ನು ಜನಪ್ರಿಯರನ್ನಾಗಿಸಿತ್ತು.
ಓರಗೆಯ ಕಲಾವಿದರ ನಡುವೆ “ದಶಾವತಾರಿ” ಎಂದೇ ಕರೆಯಲ್ಪಡುತ್ತಿದ್ದ ಇವರು ಯಾವುದೇ ವೇಷಕ್ಕಾದರೂ ಸೈ ಎನಿಸಿದ್ದರು. ವೀರ, ರೌದ್ರ ರಸದ ವೇಷಗಳಿಗೆ ಅವರ ಹಾವಭಾವ ಹೇಳಿ ಮಾಡಿಸಿದಂತಿತ್ತು. ಭೀಮ, ಅರ್ಜುನ, ಭೀಷ್ಮ, ಕರ್ಣ, ಕೌರವ, ದಶರಥ, ವಾಲಿಯಂತಹ ಪ್ರಬುದ್ಧ ಪೌರಾಣಿಕ ಪಾತ್ರಗಳಿಗೆ ಹೊಸ ಆಯಾಮ ನೀಡಿದವರು ಗೋವಿಂದ ಭಟ್ಟರು. ಕುಂಬ್ಳೆ ಸುಂದರ ರಾವ್ ಜೊತೆಗಿನ ಇವರ ಪ್ರತಿಗಾಮಿ ಮಾತುಗಾರಿಕೆ ನೋಡುಗರಲ್ಲಿ, ಕೇಳುಗರಲ್ಲಿ ಅಮೋಘ ಎನಿಸುವಂತಿತ್ತು. ವೀರ ಮತ್ತು ಕರುಣಾ ರಸದ ಪಾತ್ರಗಳಲ್ಲಿ ಇವರನ್ನು ಮೀರಿಸುವ ಮತ್ತೊಬ್ಬರಿಲ್ಲ ಎಂಬ ಮಾತು ಕಲಾವಿದರಲ್ಲಿದೆ. ಇವರು ಪತ್ನಿ, ಮೂವರು ಪುತ್ರರ ಸಹಿತ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಇವರ ಜೀವಮಾನದ ಸಾಧನೆಗೆ 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ದಕ್ಕಿದೆ. ಮಾತ್ರವಲ್ಲ ಅಭಿಮಾನಿಗಳು ಇವರ ಕಲಾ ಜೀವನವನ್ನು ದಾಖಲಿಸಲು ‘ಸವ್ಯಸಾಚಿ’ ಎಂಬ ಸ್ಮರಣ ಸಂಚಿಕೆಯನ್ನು ಅರ್ಪಿಸಿದ್ದರು. ಯಕ್ಷಗಾನದ ಮೇರು ವ್ಯಕ್ತಿತ್ವ ಸೂರಿಕುಮೇರು ಗೋವಿಂದ ಭಟ್ಟರ ನಿಧನಕ್ಕೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm