ಬ್ರೇಕಿಂಗ್ ನ್ಯೂಸ್
20-03-26 11:26 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 20: ತೆಂಕುತಿಟ್ಟು ಯಕ್ಷಗಾನದ ಮೇರು ಪ್ರತಿಭೆ, ಸವ್ಯಸಾಚಿ, ದಶಾವತಾರಿ ಎಂದೇ ಖ್ಯಾತರಾಗಿದ್ದ ಸೂರಿಕುಮೇರು ಗೋವಿಂದ ಭಟ್ (88) ಇನ್ನಿಲ್ಲ. ವೀರ ರಸದ ವೇಷಗಳಿಗೆ ಹೊಸ ಕಳೆಯನ್ನು ಮೂಡಿಸಿದ್ದ ಅಭಿನಯ ಚತುರ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗೋವಿಂದ ಭಟ್ಟರು (88) ತೀರ್ಥಹಳ್ಳಿಯ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರಿಕುಮೇರು ಎಂಬ ಸಣ್ಣ ಗ್ರಾಮದಲ್ಲಿ ಮಾರ್ಚ್ 22, 1938 ರಂದು ಜನಿಸಿದ್ದ ಗೋವಿಂದ ಭಟ್ಟರು ಯಕ್ಷಗಾನದಲ್ಲಿ ಏರಿದ ಎತ್ತರ ಅದ್ವಿತೀಯವಾಗಿತ್ತು. ತಂದೆ ಶಿವರಾಮ ಭಟ್ಟರು ಮತ್ತು ತಾಯಿ ಪಾರ್ವತಿ ಅಮ್ಮ. ಕಡು ಬಡತನದ ನಡುವೆಯೂ ಏಳನೇ ತರಗತಿಯ ವರೆಗೆ ವಿದ್ಯಾಭ್ಯಾಸ. ಓರಗೆಯವರ ಸಂಪರ್ಕ, ಯಕ್ಷಗಾನದ ಮೇಲಿನ ಅಪಾರ ಪ್ರೀತಿಯಿಂದಾಗಿ 13ನೇ ವಯಸ್ಸಿನಲ್ಲಿಯೇ ಬಣ್ಣ ಹಚ್ಚಿ ರಂಗಪ್ರವೇಶ ಮಾಡಿದ್ದರು.

ಧರ್ಮಸ್ಥಳದ ಮೇಳದಲ್ಲಿ 50 ವರ್ಷಗಳಿಗೂ ಹೆಚ್ಚು ಸುದೀರ್ಘ ಕಾಲ ಸೇವೆ ಸಲ್ಲಿಸಿದ ಗೋವಿಂದ ಭಟ್ಟರು ಮೇಳದ ಪರಿಧಿ ಮೀರಿದ ಖ್ಯಾತಿ ಗಳಿಸಿದ್ದರು. ಅತಿಥಿ ಕಲಾವಿದರ ಕೂಡುವಿಕೆಯ ಆಟದಲ್ಲಿ ಗೋವಿಂದ ಭಟ್ಟರು ಇದ್ದಾರೆ ಅಂದ್ರೆ ಅಲ್ಲೊಂದು ಹೆಚ್ಚುಗಾರಿಕೆ ಇತ್ತು. ಮೇಳದ ಶಿಸ್ತು ಮತ್ತು ಸಂಪ್ರದಾಯದ ಕಾವಲುಗಾರನಂತೆ ಪಾತ್ರಕ್ಕೆ ಮೀರದಂತೆ ಕಂಚಿನ ಕಂಠದ ಮಾತುಗಾರಿಕೆ, ಲಯಬದ್ಧ ನಾಟ್ಯ, ತಾಳಮದ್ದಲೆಗಳ ಅರ್ಥಗಾರಿಕೆ ಅವರನ್ನು ಜನಪ್ರಿಯರನ್ನಾಗಿಸಿತ್ತು.
ಓರಗೆಯ ಕಲಾವಿದರ ನಡುವೆ “ದಶಾವತಾರಿ” ಎಂದೇ ಕರೆಯಲ್ಪಡುತ್ತಿದ್ದ ಇವರು ಯಾವುದೇ ವೇಷಕ್ಕಾದರೂ ಸೈ ಎನಿಸಿದ್ದರು. ವೀರ, ರೌದ್ರ ರಸದ ವೇಷಗಳಿಗೆ ಅವರ ಹಾವಭಾವ ಹೇಳಿ ಮಾಡಿಸಿದಂತಿತ್ತು. ಭೀಮ, ಅರ್ಜುನ, ಭೀಷ್ಮ, ಕರ್ಣ, ಕೌರವ, ದಶರಥ, ವಾಲಿಯಂತಹ ಪ್ರಬುದ್ಧ ಪೌರಾಣಿಕ ಪಾತ್ರಗಳಿಗೆ ಹೊಸ ಆಯಾಮ ನೀಡಿದವರು ಗೋವಿಂದ ಭಟ್ಟರು. ಕುಂಬ್ಳೆ ಸುಂದರ ರಾವ್ ಜೊತೆಗಿನ ಇವರ ಪ್ರತಿಗಾಮಿ ಮಾತುಗಾರಿಕೆ ನೋಡುಗರಲ್ಲಿ, ಕೇಳುಗರಲ್ಲಿ ಅಮೋಘ ಎನಿಸುವಂತಿತ್ತು. ವೀರ ಮತ್ತು ಕರುಣಾ ರಸದ ಪಾತ್ರಗಳಲ್ಲಿ ಇವರನ್ನು ಮೀರಿಸುವ ಮತ್ತೊಬ್ಬರಿಲ್ಲ ಎಂಬ ಮಾತು ಕಲಾವಿದರಲ್ಲಿದೆ. ಇವರು ಪತ್ನಿ, ಮೂವರು ಪುತ್ರರ ಸಹಿತ ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.
ಇವರ ಜೀವಮಾನದ ಸಾಧನೆಗೆ 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ದಕ್ಕಿದೆ. ಮಾತ್ರವಲ್ಲ ಅಭಿಮಾನಿಗಳು ಇವರ ಕಲಾ ಜೀವನವನ್ನು ದಾಖಲಿಸಲು ‘ಸವ್ಯಸಾಚಿ’ ಎಂಬ ಸ್ಮರಣ ಸಂಚಿಕೆಯನ್ನು ಅರ್ಪಿಸಿದ್ದರು. ಯಕ್ಷಗಾನದ ಮೇರು ವ್ಯಕ್ತಿತ್ವ ಸೂರಿಕುಮೇರು ಗೋವಿಂದ ಭಟ್ಟರ ನಿಧನಕ್ಕೆ ಯಕ್ಷಗಾನ ಕಲಾವಿದರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am