ಬ್ರೇಕಿಂಗ್ ನ್ಯೂಸ್
21-03-26 11:56 am HK News Staffer ಕರಾವಳಿ
ಮಂಗಳೂರು, ಮಾರ್ಚ್ 21: ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ತುರ್ತು ಹಳಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ, ಕರಾವಳಿ ಭಾಗದ ಪ್ರಮುಖ ಮಾರ್ಗವಾದ ಮಂಗಳೂರು–ಸುಬ್ರಹ್ಮಣ್ಯ ನಡುವೆ ಸಂಚರಿಸುವ ರೈಲು ಸೇವೆಯಲ್ಲಿ ಭಾರೀ ಬದಲಾವಣೆಗಳನ್ನು ಘೋಷಿಸಲಾಗಿದೆ.
ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲುಗಳು ಒಟ್ಟು 35 ದಿನಗಳ ಕಾಲ ಸಂಪೂರ್ಣ ರದ್ದುಗೊಂಡಿವೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರೋಡ್) ಹಾಗೂ 56630 (ಸುಬ್ರಹ್ಮಣ್ಯ ರೋಡ್–ಮಂಗಳೂರು) ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಮತ್ತು ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಈ ಮಧ್ಯೆ, ಕೆಲವು ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿಯೂ ವ್ಯತ್ಯಾಸ ಉಂಟಾಗಲಿದೆ. ಯಶವಂತಪುರ–ಕಾರವಾರ (16515), ಯಶವಂತಪುರ–ಮಂಗಳೂರು (16575, 16539) ರೈಲುಗಳು ಸುಮಾರು 20 ನಿಮಿಷಗಳ ವಿಳಂಬದಿಂದ ಸಂಚರಿಸಲಿವೆ. ಮಂಗಳೂರು–ಸುಬ್ರಹ್ಮಣ್ಯ ಪ್ಯಾಸೆಂಜರ್ (56229) ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ ಸುಮಾರು 55 ನಿಮಿಷ ತಡವಾಗಿ ಓಡಲಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಮನಗಂಡು ಯುಗಾದಿ ಹಾಗೂ ರಂಜಾನ್ ಪ್ರಯುಕ್ತ ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಕೂಡ ಓಡಿಸಲಾಗುತ್ತಿದೆ. ಈ ರೈಲು ಮಾರ್ಚ್ 20ರಂದು ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಶನಿವಾರ ಬೆಳಿಗ್ಗೆ 6.45ಕ್ಕೆ ಮಡಗಾಂವ್ ತಲುಪಿದೆ.
ರೈಲು ವಾಪಸ್ಸು ಮಾರ್ಚ್ 22ರಂದು ಬೆಳಿಗ್ಗೆ 11ಕ್ಕೆ ಮಡಗಾಂವ್ನಿಂದ ಹೊರಟು, ಸೋಮವಾರ ಬೆಳಿಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ವಿಶೇಷ ರೈಲು ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು, ಉಡುಪಿ, ಕುಂದಾಪುರ, ಭಟ್ಕಳ, ಕಾರವಾರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಇದಲ್ಲದೆ, ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿಯೂ ಕಾರ್ಯಾಚರಣಾ ಕಾರಣಗಳಿಂದ ಕರ್ನೂಲ್–ಕಾಚಿಗುಡ, ರಾಯಚೂರು–ಕಾಚಿಗುಡ ಹಾಗೂ ಗದ್ವಾಲ್ ಮಾರ್ಗದ ಹಲವು ರೈಲುಗಳು ಮಾರ್ಚ್ ಮಧ್ಯದಿಂದ ಏಪ್ರಿಲ್ 1ರವರೆಗೆ ರದ್ದುಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರು ಮುಂಚಿತವಾಗಿ ತಮ್ಮ ಪ್ರಯಾಣ ಯೋಜನೆ ರೂಪಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm