ಬ್ರೇಕಿಂಗ್ ನ್ಯೂಸ್
21-03-26 11:56 am HK News Staffer ಕರಾವಳಿ
ಮಂಗಳೂರು, ಮಾರ್ಚ್ 21: ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ತುರ್ತು ಹಳಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆ, ಕರಾವಳಿ ಭಾಗದ ಪ್ರಮುಖ ಮಾರ್ಗವಾದ ಮಂಗಳೂರು–ಸುಬ್ರಹ್ಮಣ್ಯ ನಡುವೆ ಸಂಚರಿಸುವ ರೈಲು ಸೇವೆಯಲ್ಲಿ ಭಾರೀ ಬದಲಾವಣೆಗಳನ್ನು ಘೋಷಿಸಲಾಗಿದೆ.
ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರೋಡ್ ನಡುವಿನ ಪ್ಯಾಸೆಂಜರ್ ರೈಲುಗಳು ಒಟ್ಟು 35 ದಿನಗಳ ಕಾಲ ಸಂಪೂರ್ಣ ರದ್ದುಗೊಂಡಿವೆ. ರೈಲು ಸಂಖ್ಯೆ 56629 (ಮಂಗಳೂರು–ಸುಬ್ರಹ್ಮಣ್ಯ ರೋಡ್) ಹಾಗೂ 56630 (ಸುಬ್ರಹ್ಮಣ್ಯ ರೋಡ್–ಮಂಗಳೂರು) ರೈಲುಗಳು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಮತ್ತು ಜೂನ್ 10ರಿಂದ ಜೂನ್ 21ರವರೆಗೆ ಸಂಚರಿಸುವುದಿಲ್ಲ ಎಂದು ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.
ಈ ಮಧ್ಯೆ, ಕೆಲವು ಪ್ರಮುಖ ಎಕ್ಸ್ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿಯೂ ವ್ಯತ್ಯಾಸ ಉಂಟಾಗಲಿದೆ. ಯಶವಂತಪುರ–ಕಾರವಾರ (16515), ಯಶವಂತಪುರ–ಮಂಗಳೂರು (16575, 16539) ರೈಲುಗಳು ಸುಮಾರು 20 ನಿಮಿಷಗಳ ವಿಳಂಬದಿಂದ ಸಂಚರಿಸಲಿವೆ. ಮಂಗಳೂರು–ಸುಬ್ರಹ್ಮಣ್ಯ ಪ್ಯಾಸೆಂಜರ್ (56229) ರೈಲು ಏಪ್ರಿಲ್ 21ರಿಂದ ಜೂನ್ 9ರವರೆಗೆ ಸುಮಾರು 55 ನಿಮಿಷ ತಡವಾಗಿ ಓಡಲಿದೆ.
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಮನಗಂಡು ಯುಗಾದಿ ಹಾಗೂ ರಂಜಾನ್ ಪ್ರಯುಕ್ತ ಯಶವಂತಪುರ–ಮಡಗಾಂವ್–ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್ಪ್ರೆಸ್ ರೈಲು ಕೂಡ ಓಡಿಸಲಾಗುತ್ತಿದೆ. ಈ ರೈಲು ಮಾರ್ಚ್ 20ರಂದು ಬೆಳಿಗ್ಗೆ 11.50ಕ್ಕೆ ಯಶವಂತಪುರದಿಂದ ಹೊರಟು, ಶನಿವಾರ ಬೆಳಿಗ್ಗೆ 6.45ಕ್ಕೆ ಮಡಗಾಂವ್ ತಲುಪಿದೆ.
ರೈಲು ವಾಪಸ್ಸು ಮಾರ್ಚ್ 22ರಂದು ಬೆಳಿಗ್ಗೆ 11ಕ್ಕೆ ಮಡಗಾಂವ್ನಿಂದ ಹೊರಟು, ಸೋಮವಾರ ಬೆಳಿಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ಈ ವಿಶೇಷ ರೈಲು ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು, ಉಡುಪಿ, ಕುಂದಾಪುರ, ಭಟ್ಕಳ, ಕಾರವಾರ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.
ಇದಲ್ಲದೆ, ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯಲ್ಲಿಯೂ ಕಾರ್ಯಾಚರಣಾ ಕಾರಣಗಳಿಂದ ಕರ್ನೂಲ್–ಕಾಚಿಗುಡ, ರಾಯಚೂರು–ಕಾಚಿಗುಡ ಹಾಗೂ ಗದ್ವಾಲ್ ಮಾರ್ಗದ ಹಲವು ರೈಲುಗಳು ಮಾರ್ಚ್ ಮಧ್ಯದಿಂದ ಏಪ್ರಿಲ್ 1ರವರೆಗೆ ರದ್ದುಗೊಂಡಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಯಾಣಿಕರು ಮುಂಚಿತವಾಗಿ ತಮ್ಮ ಪ್ರಯಾಣ ಯೋಜನೆ ರೂಪಿಸಿಕೊಳ್ಳುವಂತೆ ರೈಲ್ವೆ ಇಲಾಖೆ ಮನವಿ ಮಾಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am