ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am