ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am