ಬ್ರೇಕಿಂಗ್ ನ್ಯೂಸ್
21-03-26 06:31 pm HK News Staffer ಕರಾವಳಿ
ಬಂಟ್ವಾಳ, ಮಾರ್ಚ್ 21: ಯುವಕನೊಬ್ಬ ಪಾನಮತ್ತನಾಗಿ ಬಂದು ಮೆಲ್ಕಾರ್ ಗುಡ್ಡೆಯಂಗಡಿ ಎಂಬಲ್ಲಿರುವ ಪೆಟ್ರೋಲ್ ಪಂಪ್ ನಲ್ಲಿ ದಾಂಧಲೆಗೈದು ಅಲ್ಲಿದ್ದ ಸೊತ್ತುಗಳನ್ನು ಧ್ವಂಸಗೈದ ಘಟನೆ ನಡೆದಿದ್ದು, ಪೊಲೀಸ್ ಒಬ್ಬರ ಎದುರಲ್ಲೇ ಆವಾಜ್ ಹಾಕುತ್ತಾ ಸ್ಥಳದಲ್ಲಿ ಹೈಡ್ರಾಮಾ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿದೆ.
ಮಾರ್ಚ್ 20ರಂದು ಸಂಜೆ ಘಟನೆ ನಡೆದಿದ್ದು, ಸಜಪಮೂಡ ಕಾರಾಜೆಯ ಅಫ್ರೀದ್ (28) ಎನ್ನುವ ಯುವಕ ಕುಡಿದು ತೂರಾಡುತ್ತಾ ಗ್ಯಾಸ್ ಹಾಕುತ್ತಿದ್ದ ಸಿಬಂದಿ ಬಳಿಗೆ ಬಂದಿದ್ದಾನೆ. ಅಲ್ಲಿದ್ದ ಸಿಬಂದಿ ಜೊತೆಗೆ ವಾಗ್ವಾದ ನಡೆಸಿ ಒಬ್ಬನಿಗೆ ಹಲ್ಲೆ ನಡೆಸಿದ್ದಾನೆ. ಆನಂತರ, ಗ್ಯಾಸ್ ಪೈಪನ್ನು ಎಳೆದು ಕಾಲಿನಲ್ಲಿ ತುಳಿದು ಅಲ್ಲಿದ್ದ ಇತರೇ ಉಪಕರಣಗಳಿಗೂ ಹಾನಿ ಮಾಡಿದ್ದಲ್ಲದೆ, ಸಿಬಂದಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ.



ಬಳಿಕ ಸ್ಥಳಕ್ಕೆ ಬಂದ ಬೀಟ್ ಪೊಲೀಸ್ ಒಬ್ಬರು ರಂಪಾಟ ಮಾಡುತ್ತಿದ್ದ ಯುವಕನನ್ನು ಎತ್ತಿಕೊಂಡು ಹೋಗಲು ಠಾಣೆಯಿಂದ ಪೊಲೀಸ್ ಜೀಪ್ ಬರಲು ಹೇಳಿದ್ದಾರೆ. ಆದರೆ ಅಷ್ಟರಲ್ಲೇ ಪೊಲೀಸರಿಗೂ ಆವಾಜ್ ಹಾಕುತ್ತಾ ಅವರಿಗೂ ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ಪೊಲೀಸ್ ಜೀಪ್ ಬರುತ್ತಲೇ ಅಲ್ಲಿಂದ ಆತನನ್ನು ಎಳಕೊಂಡು ಜೀಪಿಗೆ ತಳ್ಳಿ ಠಾಣೆಗೆ ಒಯ್ದಿದ್ದಾರೆ.
ಘಟನೆ ಬಗ್ಗೆ ಪೆಟ್ರೋಲ್ ಪಂಪ್ ಮ್ಯಾನೇಜರ್ ಆಗಿರುವ ಕುನಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು, ಆರೋಪಿ ಆಟೋ ಚಾಲಕನ ವಿರುದ್ಧ 115(2), 287, 324(4), 351(2) ಹಾಗೂ 352 ಅಡಿ ಕೇಸು ದಾಖಲಿಸಿದ್ದಾರೆ. ಆರೋಪಿ ಯುವಕ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದರೂ ಅಲ್ಲಿಗೆ ಆಟೋ ತಂದಿರಲಿಲ್ಲ. ಕುಡಿದು ತೂರಾಡುತ್ತಾ ನಡೆದುಕೊಂಡೇ ಬಂದಿದ್ದು ಸ್ಥಳದಲ್ಲಿ ಗಲಾಟೆ ನಡೆಸಿದ್ದಾನೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm