ಬ್ರೇಕಿಂಗ್ ನ್ಯೂಸ್
11-08-20 02:47 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 11: ಪುತ್ತೂರು ನಗರ ಠಾಣಾ ಪೊಲೀಸರು ಬೃಹತ್ ಗಾಂಜಾ ಅಕ್ರಮ ಜಾಲವನ್ನು ಭೇದಿಸಿದ್ದಾರೆ. ಕೇರಳದಿಂದ ಕರ್ನಾಟಕಕ್ಕೆ ತರಲಾಗುತ್ತಿದ್ದ 17.5 ಲಕ್ಷ ಮೌಲ್ಯದ 175 ಕೇಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದು ಮೂವರನ್ನು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ಕೆಎ 19 ಎಎ 9294 ನೋಂದಣಿಯ ಪಿಕ್ ಅಪ್ ವಾಹನ ಮತ್ತು ಕೆಎಲ್ 14 ಎಕ್ಸ್ 9707 ನೋಂದಣಿಯ ಕಾರಿನಲ್ಲಿ 175 ಕೇಜಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ವಾಹನದಲ್ಲಿ ಗಾಂಜಾ ಪ್ಯಾಕೆಟ್ ಮೇಲೆ ಹಸಿ ಮೆಕ್ಕೆಜೋಳ ರಾಶಿಯನ್ನು ಹಾಕಲಾಗಿತ್ತು. ಮೇಲ್ಭಾಗದಲ್ಲಿ ಜೋಳದ ಸಾಗಾಟ ನಡೆಸುತ್ತಿರುವ ರೀತಿ ಬಿಂಬಿಸಲಾಗಿತ್ತು. ಪೊಲೀಸರು ತಪಾಸಣೆ ನಡೆಸಿದಾಗ, ಬೃಹತ್ ಗಾಂಜಾ ಸಾಗಾಟ ಜಾಲ ಬಯಲಾಗಿದೆ. ವಾಹನ ಮತ್ತು ಸೊತ್ತುಗಳ ಜೊತೆ ಮೂವರನ್ನು ಬಂಧಿಸಿದ್ದು ಆರೋಪಿಗಳಾದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ನಿವಾಸಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು (26) , ಮಂಜೇಶ್ವರದ ಮಜೀರ್ ಪಳ್ಳ ನಿವಾಸಿ ಮೊಹಮ್ಮದ್ ಶಫೀಕ್ (31), ಕನ್ಯಾನ ಗ್ರಾಮದ ನಿವಾಸಿ ಖಲಂದರ್ ಶಾಫಿ(26) ವಿರುದ್ಧ ಎನ್ ಡಿಪಿಎಸ್ ಏಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಪೈಕಿ ಇಬ್ರಾಹಿಂ ವಿರುದ್ಧ ಮಂಜೇಶ್ವರ ಠಾಣೆಯಲ್ಲಿ 7 ಪ್ರಕರಣ, ಕುಂಬಳೆ ಠಾಣೆಯಲ್ಲಿ 2 ಪ್ರಕರಣ, ಖಲಂದರ್ ಶಾಫಿ ವಿರುದ್ಧ 2 ಅಕ್ರಮ ಗಾಂಜಾ ಅಕ್ರಮ ಪ್ರಕರಣ, ಒಂದು ಕೊಲೆ ಯತ್ನ ಪ್ರಕರಣ ಹಾಗೂ ಕಾವೂರು ಠಾಣೆಯಲ್ಲಿ ಒಂದು ಅಕ್ರಮ ಗಾಂಜಾ ಸಾಗಾಟ ಪ್ರಕರಣ ದಾಖಲಾಗಿರುತ್ತದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm