ಬ್ರೇಕಿಂಗ್ ನ್ಯೂಸ್
22-03-26 12:10 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 22: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾಗಿ ಸಂದೇಶ್ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 21ರಂದು ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೇಣೂರು ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು 2018ರಿಂದ 2023 ರ ವರೆಗೆ ಆಗಿಂದಾಗ್ಗೆ ಮನೆಗೆ ಬಂದು ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಇದರಂತೆ, ಪೊಲೀಸರು 376(2)ಎ 1, 376(2)ಎನ್, 384, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದು ಹಲವರನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಹೋಗಿತ್ತು. ಆದರೆ ಕಿರುಕುಳಕ್ಕೆ ಒಳಗಾದ ಯಾವುದೇ ಸಂತ್ರಸ್ತರು ದೂರು ನೀಡದ ಕಾರಣ ಪ್ರಕರಣ ಗಂಭೀರತೆ ಪಡೆದಿರಲಿಲ್ಲ. ಅಸಭ್ಯವಾಗಿ ಮಾತನಾಡಿದ ಆಡಿಯೋ ಮತ್ತು ಅಸಭ್ಯ ರೀತಿ ಮಹಿಳೆ ಜೊತೆಗೆ ಪೊಲೀಸ್ ಯೂನಿಫಾರ್ಮ್ ನಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದರು.
ಇಲಾಖಾ ತನಿಖೆಗಾಗಿ ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ಹೊಣೆ ನೀಡಲಾಗಿತ್ತು. ತನಿಖೆಯ ವೇಳೆ ಯಾವುದೇ ಮಹಿಳೆ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡುವುದಾಗಲೀ, ದೂರು ನೀಡುವುದಾಗಲೀ ಮಾಡದೇ ಇದ್ದುದರಿಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಾಕ್ಷ್ಯ ಸಿಕ್ಕಿಲ್ಲವೆಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದರು. ದುರ್ನಡತೆ ತೋರಿದ್ದಕ್ಕಾಗಿ ಅವರನ್ನು ಅಮಾನತು ಪಡಿಸಿದ್ದು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಂದೇಶ್ ಬಗ್ಗೆ ಕಮಿಷನರ್ ಮೃದು ಧೋರಣೆ ತಳೆದಿದ್ದಾರೆಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವೇಣೂರು ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದು ಪ್ರಕರಣ ಗಂಭೀರತೆ ಪಡೆದಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
20-04-26 10:54 pm
HK News Staffer
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
21-04-26 02:36 pm
HK News Staffer
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
2026ನೇ ಸಾಲಿನ ಫೆಮಿನಾ ಮಿಸ್ ಇಂಡಿಯಾ ಕಿರೀಟ ಮುಡಿಗೇರ...
20-04-26 01:02 pm
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
21-04-26 03:13 pm
HK News Staffer
ನಂತೂರು ಜಂಕ್ಷನ್ನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗ...
21-04-26 12:44 pm
ಬೀದರ್ ; ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಕ...
20-04-26 09:35 pm
30 ನಿಮಿಷ ಕೊಟ್ಟರೆ ಮಂಗಳೂರು ಕಮಿಷನರ್ ಮುಖವಾಡ ಬಯಲು...
20-04-26 03:44 pm
ಮಣಿಪಾಲದ ಸಾಫ್ಟ್ವೇರ್ ಕಂಪನಿಗೆ ಕೋಟ್ಯಂತರ ಮೌಲ್ಯದ ಷ...
20-04-26 11:13 am