ಬ್ರೇಕಿಂಗ್ ನ್ಯೂಸ್
22-03-26 12:10 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 22: ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ವೇಣೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತನ್ನ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾಗಿ ಸಂದೇಶ್ ವಿರುದ್ಧ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾರ್ಚ್ 21ರಂದು ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ವೇಣೂರು ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರು 2018ರಿಂದ 2023 ರ ವರೆಗೆ ಆಗಿಂದಾಗ್ಗೆ ಮನೆಗೆ ಬಂದು ಬಲವಂತವಾಗಿ ಅತ್ಯಾಚಾರ ಮಾಡಿರುವುದಾಗಿ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧ ದೂರು ನೀಡಿದ್ದಾರೆ. ಇದರಂತೆ, ಪೊಲೀಸರು 376(2)ಎ 1, 376(2)ಎನ್, 384, 506 ಅಡಿ ಪ್ರಕರಣ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದು ಹಲವರನ್ನು ಬ್ಲಾಕ್ಮೇಲ್ ಮಾಡಿ ಅತ್ಯಾಚಾರ ಮಾಡಿದ್ದಾಗಿ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಆಯೋಗಕ್ಕೂ ದೂರು ಹೋಗಿತ್ತು. ಆದರೆ ಕಿರುಕುಳಕ್ಕೆ ಒಳಗಾದ ಯಾವುದೇ ಸಂತ್ರಸ್ತರು ದೂರು ನೀಡದ ಕಾರಣ ಪ್ರಕರಣ ಗಂಭೀರತೆ ಪಡೆದಿರಲಿಲ್ಲ. ಅಸಭ್ಯವಾಗಿ ಮಾತನಾಡಿದ ಆಡಿಯೋ ಮತ್ತು ಅಸಭ್ಯ ರೀತಿ ಮಹಿಳೆ ಜೊತೆಗೆ ಪೊಲೀಸ್ ಯೂನಿಫಾರ್ಮ್ ನಲ್ಲಿ ಡ್ಯಾನ್ಸ್ ಮಾಡಿದ ವಿಡಿಯೋ ಹಿನ್ನೆಲೆಯಲ್ಲಿ ಸಂದೇಶ್ ಅವರನ್ನು ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಅಮಾನತು ಮಾಡಿದ್ದರು.
ಇಲಾಖಾ ತನಿಖೆಗಾಗಿ ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್ ಅವರಿಗೆ ಹೊಣೆ ನೀಡಲಾಗಿತ್ತು. ತನಿಖೆಯ ವೇಳೆ ಯಾವುದೇ ಮಹಿಳೆ ತನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಹೇಳಿಕೆ ನೀಡುವುದಾಗಲೀ, ದೂರು ನೀಡುವುದಾಗಲೀ ಮಾಡದೇ ಇದ್ದುದರಿಂದ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಾಕ್ಷ್ಯ ಸಿಕ್ಕಿಲ್ಲವೆಂದು ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದರು. ದುರ್ನಡತೆ ತೋರಿದ್ದಕ್ಕಾಗಿ ಅವರನ್ನು ಅಮಾನತು ಪಡಿಸಿದ್ದು ಅದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಸಂದೇಶ್ ಬಗ್ಗೆ ಕಮಿಷನರ್ ಮೃದು ಧೋರಣೆ ತಳೆದಿದ್ದಾರೆಂದು ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ವೇಣೂರು ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದು ಪ್ರಕರಣ ಗಂಭೀರತೆ ಪಡೆದಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm