ಬ್ರೇಕಿಂಗ್ ನ್ಯೂಸ್
22-03-26 02:42 pm HK News Staffer ಕರಾವಳಿ
ಉಳ್ಳಾಲ, ಮಾ.22: ಕಳೆದ ಮಳೆಗಾಲದ ಪ್ರಾಕೃತಿಕ ವಿಕೋಪದಲ್ಲಿ ಮನೆಯನ್ನೇ ಕಳಕೊಂಡಿದ್ದ ಕೊಲ್ಯ ಸಾರಸ್ವತ ಕಾಲನಿಯ ತೊಂಭತ್ತರ ವೃದ್ಧೆ ಗಿರಿಜಾ ಅವರ ಕುಟುಂಬಕ್ಕೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಧನಲಕ್ಷ್ಮಿ ಗಟ್ಟಿಯವರು ದಾನಿಗಳ ಸಹಕಾರದಿಂದ ನಿರ್ಮಿಸಿಕೊಟ್ಟ ನೂತನ ಮನೆ "ಗಿರಿಜಾ ನಿಲಯ"ದ ಗೃಹಪ್ರವೇಶ ಸಮಾರಂಭ ಶನಿವಾರ ನಡೆಯಿತು.
ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷ ಜಗದೀಶ ಆಳ್ವ ಕುವೆತ್ತಬೈಲ್ ಅವರು ನೂತನ ಮನೆಯ ಕೀಲಿ ಕೈಯನ್ನು ಗಿರಿಜಾ ಅವರಿಗೆ ಹಸ್ತಾಂತರಿಸಿದರು. ಕಳೆದ ವರ್ಷ ಮೇ ತಿಂಗಳ ಕೊನೆಯಲ್ಲಿ ಸುರಿದಿದ್ದ ಭಾರೀ ಮಳೆಗೆ ವೃದ್ಧೆ ಗಿರಿಜಾ ಗಟ್ಟಿ ಅವರ ಗುಡಿಸಲಿನ ಮೇಲೆ ಪಕ್ಕದ ಖಾಸಗಿ ಶಾಲೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ ಮನೆ ಸಂಪೂರ್ಣ ನೆಲಸಮಗೊಂಡಿತ್ತು. ಘಟನೆಯ ನಾಲ್ಕು ದಿನಗಳ ಹಿಂದಷ್ಟೆ ಗಿರಿಜಾ ಕುಟುಂಬವನ್ನು ಧನಲಕ್ಷ್ಮಿ ನೇತೃತ್ವದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದ ಪರಿಣಾಮ ಸಂಭವನೀಯ ಭಾರೀ ಅನಾಹುತ ತಪ್ಪಿತ್ತು.
ಗಿರಿಜಾ ಅವರ ಕಿರಿಯ ಮೊಮ್ಮಗಳಾದ ರೂಪಿಕಾ ಅವರ ಪತಿ ಕಾಯಿಲೆಯಿಂದ ಮೃತಪಟ್ಟಿದ್ದರು. ಮೊಮ್ಮಗಳು ಮತ್ತು ಆಕೆಯ ಇಬ್ಬರು ಮಕ್ಕಳನ್ನ ಸಾಕುವ ಜವಬ್ದಾರಿಯನ್ನೂ ಗಿರಿಜಾ ಅವರೇ ಹೊತ್ತುಕೊಂಡಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೇ ಕುಟುಂಬವು ಇದ್ದ ಮನೆಯನ್ನೂ ಕಳಕೊಂಡಿತ್ತು. ಅಶಕ್ತ ಕುಟುಂಬಕ್ಕೆ ಆಧಾರವಾಗಿ ನಿಂತ ಧನಲಕ್ಷ್ಮಿ ಅವರು ರೂಪಿಕಾಳಿಗೆ ಜೀವನೋಪಾಯಕ್ಕಾಗಿ ಶಿಶುಪಾಲನಾ ಕೇಂದ್ರವೊಂದರಲ್ಲಿ ಶಿಶುಪಾಲಕಿ ಉದ್ಯೋಗವನ್ನು ಒದಗಿಸಿ ಕೊಟ್ಟಿದ್ದರು. ತನ್ನಲ್ಲಿ ಆರ್ಥಿಕ ಸಂಪತ್ತು ಇಲ್ಲದಿದ್ದರೂ ಸಹ ಸಮಾಜದ ಉದಾರಿ ದಾನಿಗಳ ನೆರವಿನಿಂದ ಗಿರಿಜಾ ಕುಟುಂಬಕ್ಕೆ ಸುಂದರ ಮನೆಯೊಂದನ್ನ ನಿರ್ಮಿಸಿ ಕೊಟ್ಟಿದ್ದಾರೆ.




ಗಿರಿಜಾ ಅವರಿಗೆ ಮನೆ ನಿರ್ಮಾಣದ ಯೋಜನೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿದ್ದ ವರದಿ ನೋಡಿದ್ದ ಸಂಸದ ಬ್ರಿಜೇಶ್ ಚೌಟ ಅವರು ವೈಯಕ್ತಿಕವಾಗಿ ಆರ್ಥಿಕ ಸಹಕಾರ ನೀಡಿದ್ದಲ್ಲದೆ, ಅನೇಕ ದಾನಿಗಳು ಕೂಡ ಧನ ಸಹಾಯ ನೀಡಿ ಸಹಕರಿಸಿದ್ದಾರೆ. ಮನೆ ನಿರ್ಮಾಣಕ್ಕೆ ಎಂಟೂವರೆ ಲಕ್ಷ ರೂಪಾಯಿ ವೆಚ್ಚ ತಗುಲಿದ್ದು, ಗುತ್ತಿಗೆದಾರರಿಗೆ ಇನ್ನೂ ಮೂರುವರೆ ಲಕ್ಷ ರೂಪಾಯಿ ಹಣ ಪಾವತಿಸಲು ಬಾಕಿ ಇದೆ. ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್ ನ ಪರಿಹಾರ ನಿಧಿಯ ನಿರೀಕ್ಷೆಯಲ್ಲಿದ್ದು, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸೋಮೇಶ್ವರ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಪುರುಷೋತ್ತಮ ಅವರು ಅದಕ್ಕಾಗಿ ಶ್ರಮಿಸುತ್ತಿದ್ದಾರೆಂದು ಧನಲಕ್ಷ್ಮಿ ಗಟ್ಟಿ ತಿಳಿಸಿದ್ದಾರೆ.
ಧನಲಕ್ಷ್ಮಿ ಅವರು ಓರ್ವ ಮಹಿಳೆಯಾಗಿ ಇಳಿ ವಯಸ್ಸಿನ ವೃದ್ಧೆಗೆ ಮನೆ ಕಟ್ಟಿ ಕೊಟ್ಟಿರುವುದು ಶ್ಲಾಘನೀಯ ಹಾಗೂ ಎಲ್ಲರಿಗೂ ಮಾದರಿ ಕಾರ್ಯವಾಗಿದೆ. ಈ ಸತ್ಕಾರ್ಯಕ್ಕೆ ಆರ್ಥಿಕವಾಗಿ ಸಹಕರಿಸಿದ ದಾನಿಗಳ ಕಾರ್ಯವೂ ಅಭಿನಂದನಾರ್ಹವಾಗಿದೆ. ಎಲ್ಲರ ಪ್ರಯತ್ನದಲ್ಲಿ ಗಿರಿಜಾ ಅವರು ತಮ್ಮ ಜೀವನದ ಅಂತಿಮ ದಿನಗಳನ್ನು ಸ್ವಂತ ಸುಂದರ ಮನೆಯಲ್ಲಿ ಕಳೆಯುವಂತಾಗಿದೆ. ಧನಲಕ್ಷ್ಮಿ ಅವರಿಂದ ಮತ್ತಷ್ಟು ಅಶಕ್ತರಿಗೆ ಮನೆ ನಿರ್ಮಾಣಗೊಳಿಸುವ ಕಾರ್ಯ ಮುಂದುವರೆಯಲಿಯೆಂದು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ ಆಳ್ವ ಕುವೆತ್ತಬೈಲ್ ಹಾರೈಸಿದರು.
ಮಾನವೀಯ ನೆಲೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿಕೊಟ್ಟ ಗುತ್ತಿಗೆದಾರರಾದ ಸುಂದರ ಗಟ್ಟಿ, ಗಾಯತ್ರಿ ಗಟ್ಟಿ ದಂಪತಿಯನ್ನ ಸನ್ಮಾನಿಸಲಾಯಿತು.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 02:42 pm
HK News Staffer
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm