ಬ್ರೇಕಿಂಗ್ ನ್ಯೂಸ್
22-03-26 07:30 pm HK News Staffer ಕರಾವಳಿ
ಉಡುಪಿ, ಮಾರ್ಚ್ 22: ಜಿಲ್ಲೆಯ ರಾಜಕೀಯದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಗ್ವಾದ ತೀವ್ರಗೊಂಡಿದೆ. ಮಾಜಿ ಶಾಸಕ ರಘುಪತಿ ಭಟ್ ಹಾಲಿ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಗಂಭೀರ ಆರೋಪಗಳನ್ನು ಹೊರ ಹಾಕಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಬಡಾನಿಡಿಯೂರು ಗ್ರಾಮದಲ್ಲಿ ರೆಸಾರ್ಟ್ ನಿರ್ಮಾಣಕ್ಕಾಗಿ ಸಲ್ಲಿಸಿದ್ದ ಸಿಂಗಲ್ ಲೇಔಟ್ ಅರ್ಜಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಮಾಡಲಾಗುತ್ತಿದೆ ಎಂದು ಭಟ್ ಆರೋಪಿಸಿದ್ದಾರೆ. 2024ರ ಮಾರ್ಚ್ 20ರಂದು ಅರ್ಜಿ ಸಲ್ಲಿಸಿದ್ದರೂ, ಸಾಮಾನ್ಯವಾಗಿ ಮೂರು ತಿಂಗಳಲ್ಲಿ ಸಿಗಬೇಕಿದ್ದ ಅನುಮತಿ ಎರಡು ವರ್ಷವಾದರೂ ಲಭ್ಯವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಧಿಕಾರಿಗಳು ಶಾಸಕರ ಒತ್ತಡದಿಂದಲೇ ಅನುಮತಿ ನೀಡಲು ಹಿಂಜರಿಯುತ್ತಿದ್ದಾರೆ ಎಂದು ಕಿಡಿಕಾರಿದ ಭಟ್, ಹೈಕೋರ್ಟ್ 30 ದಿನಗಳಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ ಅದನ್ನು ಪಾಲಿಸಲಾಗಿಲ್ಲ ಎಂದು ಮತ್ತೊಂದು ಗಂಭೀರ ಆರೋಪವಾಗಿ ಮಾಡಿದ್ದಾರೆ. ಸಿ.ಆರ್.ಝೆಡ್ ಅನುಮತಿ, ಜೋನ್ ಚೇಂಜ್ ಹಾಗೂ ಕಮರ್ಷಿಯಲ್ ಕನ್ವರ್ಷನ್ ಸೇರಿದಂತೆ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡಿದ್ದರೂ, ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಫೈಲ್ ತಡೆಹಿಡಿಯಲಾಗಿದೆ ಎಂದು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕನ ಧೋರಣೆಯನ್ನು ಖಂಡಿಸಿ ಸೋಮವಾರದಿಂದ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಆರಂಭಿಸುವುದಾಗಿ ಭಟ್ ತಿಳಿಸಿದ್ದಾರೆ. “ನ್ಯಾಯ ಸಿಗುವವರೆಗೆ ಹೋರಾಟ ಮುಂದುವರಿಯುತ್ತದೆ. ಇದು ರಾಜಕೀಯ ಹೋರಾಟವಲ್ಲ, ವೈಯಕ್ತಿಕ ಹಕ್ಕಿಗಾಗಿ ನಡೆಸುತ್ತಿರುವ ಹೋರಾಟ” ಎಂದು ಅವರು ಹೇಳಿದ್ದಾರೆ.
ಉಡುಪಿಯಲ್ಲಿ ಇಂತಹ ರಾಜಕೀಯ ದ್ವೇಷದ ಘಟನೆಗಳು ಅಪರೂಪವಾಗಿದ್ದು, ಬೇರೆ ಪಕ್ಷದವರಾದರೂ ವೈಯಕ್ತಿಕ ಉದ್ಯಮಗಳಿಗೆ ಅಡ್ಡಿಪಡಿಸುವ ಸಂಪ್ರದಾಯ ಇಲ್ಲ ಎಂದು ಅವರು ಹೇಳಿದರು. ಯಶ್ ಪಾಲ್ ಸುವರ್ಣ ಶಾಸಕರಾಗಲು ತಾನು ಸಹಕಾರ ನೀಡಿದ್ದೇನೆ ಎಂದು ನೆನಪಿಸಿಕೊಂಡ ಭಟ್, ಈಗ ಅದೇ ವ್ಯಕ್ತಿಯಿಂದ ಅಡಚಣೆ ಎದುರಿಸುತ್ತಿದ್ದೇನೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 12:18 pm
HK News Staffer
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm