ಬ್ರೇಕಿಂಗ್ ನ್ಯೂಸ್
23-03-26 02:24 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಸಂತ್ರಸ್ತ ಮಹಿಳೆಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವ ಪರಮೇಶ್ವರ್ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, "ಮೂಡುಬಿದ್ರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ಸತ್ಯಾಸತ್ಯತೆ ತಿಳಿಯಬೇಕು. ಈ ಕಾರಣದಿಂದಲೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. 'ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಆಯೋಗದ ಮಧ್ಯಸ್ಥಿಕೆ:
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಗೃಹ ಸಚಿವರ ಬಳಿ ಕರೆದುಕೊಂಡು ಹೋಗಿದ್ದರು. ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ' ಎಂದು ಚೌಧರಿ ಹೇಳಿದರು.
"ಗೃಹ ಸಚಿವರು ಸಂತ್ರಸ್ತೆಯವರ ಮಾತನ್ನು ಶ್ರದ್ಧೆಯಿಂದ ಕೇಳಿಕೊಂಡು, ಪ್ರಕರಣವನ್ನು ತಕ್ಷಣ ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯಾಸತ್ಯತೆ ಬೇಗವೇ ಬಹಿರಂಗವಾಗಲಿದೆ," ಎಂದರು. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕ ನಂಬಿಕೆ ಉಳಿಸಿಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದು, ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವಂತೆ ಭರವಸೆ ನೀಡಿದೆ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm