ಬ್ರೇಕಿಂಗ್ ನ್ಯೂಸ್
23-03-26 02:24 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 23: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಮೂಡುಬಿದ್ರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಸಂತ್ರಸ್ತ ಮಹಿಳೆಯರು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಸಂತ್ರಸ್ತೆಯರ ಅಹವಾಲು ಆಲಿಸಿದ ಗೃಹ ಸಚಿವ ಪರಮೇಶ್ವರ್ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ತಿಳಿಸಿದ್ದಾರೆ. ಬಳಿಕ ಮಾಧ್ಯಮಕ್ಕೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, "ಮೂಡುಬಿದ್ರೆ ಘಟನೆಯ ಕುರಿತು ಸಂತ್ರಸ್ತೆಯರು ನೀಡಿದ ಮಾಹಿತಿ ಆಧಾರದ ಮೇಲೆ ಸತ್ಯಾಸತ್ಯತೆ ತಿಳಿಯಬೇಕು. ಈ ಕಾರಣದಿಂದಲೇ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸಲು ಡಿಜಿ-ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಈಗಾಗಲೇ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದ ಮೇಲೆ ಸಂಬಂಧಪಟ್ಟ ಇನ್ಸ್ ಪೆಕ್ಟರ್ ಅವರನ್ನು ಅಮಾನತುಗೊಳಿಸಲಾಗಿದೆ. 'ತನಿಖೆಯ ವರದಿಯನ್ನು ತುರ್ತಾಗಿ ನೀಡುವಂತೆ ಸೂಚಿಸಿದ್ದೇವೆ. ಕೃತ್ಯದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದು ಸಿಐಡಿ ತನಿಖೆಯಿಂದ ಸಂಪೂರ್ಣವಾಗಿ ಹೊರಬರಲಿದೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳಾ ಆಯೋಗದ ಮಧ್ಯಸ್ಥಿಕೆ:
ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸಂತ್ರಸ್ತೆಯರನ್ನು ಗೃಹ ಸಚಿವರ ಬಳಿ ಕರೆದುಕೊಂಡು ಹೋಗಿದ್ದರು. ಸಂತ್ರಸ್ತೆಯರು ತಮ್ಮ ನೋವು ಮತ್ತು ಘಟನೆಯ ತೀವ್ರತೆಯನ್ನು ನನ್ನ ಮುಂದೆ ತೆರೆದಿಟ್ಟಿದ್ದರು. ಇದನ್ನು ನೇರವಾಗಿ ಗೃಹ ಸಚಿವರ ಗಮನಕ್ಕೆ ತರುವುದೇ ಸೂಕ್ತ ಎಂದು ನನಗೆ ಅನಿಸಿತು. ಅವರಿಗೆ ನ್ಯಾಯ ಸಿಗುವ ಏಕೈಕ ಉದ್ದೇಶದಿಂದ ಇಂದು ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ' ಎಂದು ಚೌಧರಿ ಹೇಳಿದರು.
"ಗೃಹ ಸಚಿವರು ಸಂತ್ರಸ್ತೆಯವರ ಮಾತನ್ನು ಶ್ರದ್ಧೆಯಿಂದ ಕೇಳಿಕೊಂಡು, ಪ್ರಕರಣವನ್ನು ತಕ್ಷಣ ಸಿಐಡಿಗೆ ವರ್ಗಾಯಿಸಲು ಸೂಚಿಸಿದ್ದಾರೆ. ಸಂತ್ರಸ್ತೆಯರು ನೀಡಿದ ಸಾಕ್ಷ್ಯಗಳು ತನಿಖೆಗೆ ಪೂರಕವಾಗಿವೆ. ಸತ್ಯಾಸತ್ಯತೆ ಬೇಗವೇ ಬಹಿರಂಗವಾಗಲಿದೆ," ಎಂದರು. ಸರ್ಕಾರವು ಪೊಲೀಸ್ ಇಲಾಖೆ ಮೇಲೆ ಸಾರ್ವಜನಿಕ ನಂಬಿಕೆ ಉಳಿಸಿಕೊಳ್ಳಲು ಕಠಿಣ ಕ್ರಮ ಕೈಗೊಂಡಿದ್ದು, ಸಂತ್ರಸ್ತೆಯರಿಗೆ ಸೂಕ್ತ ಭದ್ರತೆ ಮತ್ತು ನ್ಯಾಯ ಒದಗಿಸುವಂತೆ ಭರವಸೆ ನೀಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am