ಬ್ರೇಕಿಂಗ್ ನ್ಯೂಸ್
24-03-26 08:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 24 : ಪ್ರವಾಸಿ ವಾಹನಗಳಲ್ಲಿ 'ಪ್ಯಾನಿಕ್ ಬಟನ್' ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶದ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಕೆ., ಈ ಸಾಧನವು ತಾಂತ್ರಿಕವಾಗಿ ವಿಫಲವಾಗಿದ್ದು, ಕೇವಲ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ಈ ಅವೈಜ್ಞಾನಿಕತೆಯನ್ನು ನಿಲ್ಲಿಸದೇ ಇದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನೆರೆಯ ಕೇರಳ ರಾಜ್ಯದಲ್ಲಿ ಜಿಎಸ್ಟಿ ಸೇರಿದಂತೆ ಸುಮಾರು 4,000 ರೂಪಾಯಿಗೆ ಸಿಗುವ ಪ್ಯಾನಿಕ್ ಬಟನ್ ಸಾಧನಕ್ಕೆ ಕರ್ನಾಟಕದಲ್ಲಿ ಅಕ್ರಮವಾಗಿ 13,500 ರಿಂದ 16,000 ರೂಪಾಯಿ ವರೆಗೆ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆಯು ಉಚ್ಚ ನ್ಯಾಯಾಲಯಕ್ಕೆ ಈ ಸಾಧನದ ಬೆಲೆ 8,250 ರೂಪಾಯಿ ಎಂದು ಮಾಹಿತಿ ನೀಡಿದ್ದರೂ, ವಾಸ್ತವದಲ್ಲಿ ಖಾಸಗಿ ಕಂಪನಿಗಳು ದುಪ್ಪಟ್ಟು ಹಣ ಪಡೆಯುತ್ತಿವೆ. ಅಚ್ಚರಿ ವಿಷಯವೆಂದರೆ, ಇಷ್ಟು ದೊಡ್ಡ ಮೊತ್ತ ಪಡೆದರೂ ಕಂಪನಿಗಳು ಚಾಲಕರಿಗೆ ಯಾವುದೇ ಅಧಿಕೃತ ಬಿಲ್ ನೀಡಲು ನಿರಾಕರಿಸುತ್ತಿವೆ ಎಂದು ಅವರು ದೂರಿದರು.
ಪ್ರಯಾಣಿಕರ ಸುರಕ್ಷತೆಗಾಗಿ ಈ ಬಟನ್ ಒತ್ತಿದರೆ ಅದು ಕಂಟ್ರೋಲ್ ರೂಮ್ಗೆ ಸಂದೇಶ ರವಾನಿಸಬೇಕು. ಆದರೆ ಪ್ರಸ್ತುತ ಅಳವಡಿಸಲಾಗಿರುವ ಸಾಧನಗಳು ʻಡಮ್ಮಿ'ಯಾಗಿದ್ದು, ಬಟನ್ ಒತ್ತಿದರೂ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ನೆರವು ನೀಡಬೇಕಾದ ಇಆರ್ಎಸ್ (ERS) ವ್ಯವಸ್ಥೆಯೂ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಇದರಿಂದ ಯಾವುದೇ ಲಾಭವಿಲ್ಲ. ಬಟನ್ ಒತ್ತಿದ ಒಂದು ವಾರದ ನಂತರವೂ ಚಾಲಕರಿಗೆ ಯಾವುದೇ ಕರೆಗಳು ಬರುತ್ತಿಲ್ಲ, ಬಂದರೂ ಅದು ಪ್ರಯಾಣಿಕರಿಗೆ ತಲುಪುತ್ತಿಲ್ಲ. ಪ್ರಯಾಣಿಕರಿಗೂ ಇಂಥದೊಂದು ಬಟನ್ ಇದೆ ಎಂಬ ಮಾಹಿತಿಯೂ ಇಲ್ಲ ಎಂದು ಆನಂದ್ ಆರೋಪಿಸಿದರು.
ಈಗಾಗಲೇ ಸಾಲ ಮಾಡಿ ಪ್ಯಾನಿಕ್ ಬಟನ್ ಅಳವಡಿಸಿಕೊಂಡಿರುವ ಚಾಲಕರಿಗೆ ಈಗ ವಾರ್ಷಿಕ ರಿಚಾರ್ಜ್ ಹೆಸರಿನಲ್ಲಿ ಕಂಪನಿಗಳು ಕಿರುಕುಳ ನೀಡುತ್ತಿವೆ. ಸರ್ಕಾರ ನಿಗದಿಪಡಿಸಿದ 1,800 ರೂಪಾಯಿ ಬದಲಿಗೆ 3,800 ರೂಪಾಯಿ ನೀಡುವಂತೆ ಒತ್ತಾಯಿಸಲಾಗುತ್ತಿದೆ. ರಿಚಾರ್ಜ್ ಮಾಡದ ವಾಹನಗಳ ಎಫ್ಸಿ (FC) ಅನ್ನು ಆರ್ಟಿಒ ಅಧಿಕಾರಿಗಳು ತಡೆಹಿಡಿಯುತ್ತಿರುವುದು ಚಾಲಕರನ್ನು ಸಂಕಷ್ಟಕ್ಕೆ ದೂಡಿದೆ. ನಿರ್ಭಯಾ ಪ್ರಕರಣ ನಡೆದಿದ್ದು ಬಸ್ಸಿನಲ್ಲಿ ಆಗಿದ್ದರೂ, ಅದನ್ನು ಕೇವಲ ಟ್ಯಾಕ್ಸಿ ಮತ್ತು ಕ್ಯಾಬ್ಗಳಿಗೆ ಸೀಮಿತಗೊಳಿಸಿರುವುದು ವಿರೋಧಾಭಾಸ ಎಂದು ಅವರು ಅಭಿಪ್ರಾಯಪಟ್ಟರು.
ಈ ಬಗ್ಗೆ ಅಧಿವೇಶನದಲ್ಲಿ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹಾಗೂ ಎಂಎಲ್ಸಿ ಐವನ್ ಡಿಸೋಜಾ ಧ್ವನಿ ಎತ್ತಿದ್ದರೂ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಈ ಅವೈಜ್ಞಾನಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸದಿದ್ದರೆ ಮಂಗಳೂರು ಮತ್ತು ಉಡುಪಿಯ ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಂಘ ಎಚ್ಚರಿಸಿದೆ.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಹರೀಶ್ ಶೆಟ್ಟಿ ಕುತ್ತಾರ್, ಕಾರ್ಯದರ್ಶಿ ರಾಜೇಶ್, ನಾಗೇಶ್ ಮಿತ್ತಡ್ಕ, ಖಜಾಂಜಿ ಸುರೇಶ್ ಸಾಲ್ಯಾನ್, ಮಾಜಿ ಪದಾಧಿಕಾರಿ ಶುಭಕರ ಶೆಟ್ಟಿ ಹಾಗೂ ಉದಯ ಕುಮಾರ್ ಉಪಸ್ಥಿತರಿದ್ದರು.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm