ಬ್ರೇಕಿಂಗ್ ನ್ಯೂಸ್
24-03-26 08:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 24 : ಪ್ರವಾಸಿ ವಾಹನಗಳಲ್ಲಿ 'ಪ್ಯಾನಿಕ್ ಬಟನ್' ಅಳವಡಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶದ ಹಿಂದೆ ಭಾರಿ ಅವ್ಯವಹಾರ ನಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ಗಂಭೀರ ಆರೋಪ ಮಾಡಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಕೆ., ಈ ಸಾಧನವು ತಾಂತ್ರಿಕವಾಗಿ ವಿಫಲವಾಗಿದ್ದು, ಕೇವಲ ಹಣ ಮಾಡುವ ದಂಧೆಯಾಗಿ ಮಾರ್ಪಟ್ಟಿದೆ. ಈ ಅವೈಜ್ಞಾನಿಕತೆಯನ್ನು ನಿಲ್ಲಿಸದೇ ಇದ್ದರೆ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ನೆರೆಯ ಕೇರಳ ರಾಜ್ಯದಲ್ಲಿ ಜಿಎಸ್ಟಿ ಸೇರಿದಂತೆ ಸುಮಾರು 4,000 ರೂಪಾಯಿಗೆ ಸಿಗುವ ಪ್ಯಾನಿಕ್ ಬಟನ್ ಸಾಧನಕ್ಕೆ ಕರ್ನಾಟಕದಲ್ಲಿ ಅಕ್ರಮವಾಗಿ 13,500 ರಿಂದ 16,000 ರೂಪಾಯಿ ವರೆಗೆ ವಸೂಲಿ ಮಾಡಲಾಗುತ್ತಿದೆ. ಸಾರಿಗೆ ಇಲಾಖೆಯು ಉಚ್ಚ ನ್ಯಾಯಾಲಯಕ್ಕೆ ಈ ಸಾಧನದ ಬೆಲೆ 8,250 ರೂಪಾಯಿ ಎಂದು ಮಾಹಿತಿ ನೀಡಿದ್ದರೂ, ವಾಸ್ತವದಲ್ಲಿ ಖಾಸಗಿ ಕಂಪನಿಗಳು ದುಪ್ಪಟ್ಟು ಹಣ ಪಡೆಯುತ್ತಿವೆ. ಅಚ್ಚರಿ ವಿಷಯವೆಂದರೆ, ಇಷ್ಟು ದೊಡ್ಡ ಮೊತ್ತ ಪಡೆದರೂ ಕಂಪನಿಗಳು ಚಾಲಕರಿಗೆ ಯಾವುದೇ ಅಧಿಕೃತ ಬಿಲ್ ನೀಡಲು ನಿರಾಕರಿಸುತ್ತಿವೆ ಎಂದು ಅವರು ದೂರಿದರು.
ಪ್ರಯಾಣಿಕರ ಸುರಕ್ಷತೆಗಾಗಿ ಈ ಬಟನ್ ಒತ್ತಿದರೆ ಅದು ಕಂಟ್ರೋಲ್ ರೂಮ್ಗೆ ಸಂದೇಶ ರವಾನಿಸಬೇಕು. ಆದರೆ ಪ್ರಸ್ತುತ ಅಳವಡಿಸಲಾಗಿರುವ ಸಾಧನಗಳು ʻಡಮ್ಮಿ'ಯಾಗಿದ್ದು, ಬಟನ್ ಒತ್ತಿದರೂ ಯಾವುದೇ ಪ್ರತಿಕ್ರಿಯೆ ಸಿಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ನೆರವು ನೀಡಬೇಕಾದ ಇಆರ್ಎಸ್ (ERS) ವ್ಯವಸ್ಥೆಯೂ ಇಲ್ಲದಿರುವುದರಿಂದ ಪ್ರಯಾಣಿಕರಿಗೆ ಇದರಿಂದ ಯಾವುದೇ ಲಾಭವಿಲ್ಲ. ಬಟನ್ ಒತ್ತಿದ ಒಂದು ವಾರದ ನಂತರವೂ ಚಾಲಕರಿಗೆ ಯಾವುದೇ ಕರೆಗಳು ಬರುತ್ತಿಲ್ಲ, ಬಂದರೂ ಅದು ಪ್ರಯಾಣಿಕರಿಗೆ ತಲುಪುತ್ತಿಲ್ಲ. ಪ್ರಯಾಣಿಕರಿಗೂ ಇಂಥದೊಂದು ಬಟನ್ ಇದೆ ಎಂಬ ಮಾಹಿತಿಯೂ ಇಲ್ಲ ಎಂದು ಆನಂದ್ ಆರೋಪಿಸಿದರು.
ಈಗಾಗಲೇ ಸಾಲ ಮಾಡಿ ಪ್ಯಾನಿಕ್ ಬಟನ್ ಅಳವಡಿಸಿಕೊಂಡಿರುವ ಚಾಲಕರಿಗೆ ಈಗ ವಾರ್ಷಿಕ ರಿಚಾರ್ಜ್ ಹೆಸರಿನಲ್ಲಿ ಕಂಪನಿಗಳು ಕಿರುಕುಳ ನೀಡುತ್ತಿವೆ. ಸರ್ಕಾರ ನಿಗದಿಪಡಿಸಿದ 1,800 ರೂಪಾಯಿ ಬದಲಿಗೆ 3,800 ರೂಪಾಯಿ ನೀಡುವಂತೆ ಒತ್ತಾಯಿಸಲಾಗುತ್ತಿದೆ. ರಿಚಾರ್ಜ್ ಮಾಡದ ವಾಹನಗಳ ಎಫ್ಸಿ (FC) ಅನ್ನು ಆರ್ಟಿಒ ಅಧಿಕಾರಿಗಳು ತಡೆಹಿಡಿಯುತ್ತಿರುವುದು ಚಾಲಕರನ್ನು ಸಂಕಷ್ಟಕ್ಕೆ ದೂಡಿದೆ. ನಿರ್ಭಯಾ ಪ್ರಕರಣ ನಡೆದಿದ್ದು ಬಸ್ಸಿನಲ್ಲಿ ಆಗಿದ್ದರೂ, ಅದನ್ನು ಕೇವಲ ಟ್ಯಾಕ್ಸಿ ಮತ್ತು ಕ್ಯಾಬ್ಗಳಿಗೆ ಸೀಮಿತಗೊಳಿಸಿರುವುದು ವಿರೋಧಾಭಾಸ ಎಂದು ಅವರು ಅಭಿಪ್ರಾಯಪಟ್ಟರು.
ಈ ಬಗ್ಗೆ ಅಧಿವೇಶನದಲ್ಲಿ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಹಾಗೂ ಎಂಎಲ್ಸಿ ಐವನ್ ಡಿಸೋಜಾ ಧ್ವನಿ ಎತ್ತಿದ್ದರೂ ಸರ್ಕಾರದಿಂದ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಈ ಅವೈಜ್ಞಾನಿಕ ಪದ್ಧತಿಯನ್ನು ಕೂಡಲೇ ನಿಲ್ಲಿಸದಿದ್ದರೆ ಮಂಗಳೂರು ಮತ್ತು ಉಡುಪಿಯ ಸಮಾನ ಮನಸ್ಕ ಸಂಘಟನೆಗಳ ಜೊತೆಗೂಡಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಸಂಘ ಎಚ್ಚರಿಸಿದೆ.
ಗೋಷ್ಠಿಯಲ್ಲಿ ಉಪಾಧ್ಯಕ್ಷ ಹರೀಶ್ ಶೆಟ್ಟಿ ಕುತ್ತಾರ್, ಕಾರ್ಯದರ್ಶಿ ರಾಜೇಶ್, ನಾಗೇಶ್ ಮಿತ್ತಡ್ಕ, ಖಜಾಂಜಿ ಸುರೇಶ್ ಸಾಲ್ಯಾನ್, ಮಾಜಿ ಪದಾಧಿಕಾರಿ ಶುಭಕರ ಶೆಟ್ಟಿ ಹಾಗೂ ಉದಯ ಕುಮಾರ್ ಉಪಸ್ಥಿತರಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm