ಬ್ರೇಕಿಂಗ್ ನ್ಯೂಸ್
25-03-26 05:23 pm HK News Staffer ಕರಾವಳಿ
Photo credits : Indian Express
ಮಂಗಳೂರು, ಮಾರ್ಚ್ 25: ಅಮೆರಿಕ- ಇರಾನ್ ಸಂಘರ್ಷದ ಪರಿಣಾಮ ಹೊರ್ಮುಜ್ ಜಲಸಂಧಿಯಲ್ಲಿ ಬಾಕಿಯಾಗಿದ್ದ ಮಂಗಳೂರು ಮೂಲದ ನಾವಿಕನಿರುವ ಎಲ್ ಪಿಜಿ ಹೊತ್ತ ಹಡಗು ಸೇಫ್ ಆಗಿದ್ದು, ಸದ್ಯಕ್ಕೆ ಭಾರತೀಯ ನೌಕಾಪಡೆಯ ಎಸ್ಕಾರ್ಟ್ ನಲ್ಲಿದೆ. ಕೆಲವೇ ದಿನಗಳಲ್ಲಿ ತಾಯ್ನಾಡು ತಲುಪುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
20 ದಿನಗಳಿಂದ ಹೊರ್ಮುಜ್ ಜಲಸಂಧಿಯಲ್ಲಿ ಎಲ್ ಪಿಜಿ ಹೊತ್ತ ಹಡಗು ಬಾಕಿಯಾಗಿದ್ದು ಅದರಲ್ಲಿರುವ ಸಿಬಂದಿ ಆತಂಕಕ್ಕೀಡಾಗಿದ್ದರು. ತಾವಿರುವ ಹಡಗಿನ ಮೇಲಿನಿಂದಲೇ ಮಿಸೈಲ್ ತೂರಾಟ ಆಗುತ್ತಿದ್ದು, ಜೀವ ಭಯ ಉಂಟಾಗಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಭಾರತದ ನೌಕಾಪಡೆ ಅಲ್ಲಿಗೆ ತೆರಳಿದ್ದು ಅಲ್ಲಿರುವ ತೈಲ ಹಡಗುಗಳಿಗೆ ರಕ್ಷಣೆ ಒದಗಿಸಿದೆ.

ಈಗ ಒಮಾನ್ ತೀರದ ಸಮುದ್ರದಲ್ಲಿ ನಿಲ್ಲಿಸಲಾಗಿದ್ದು ಅಪಾಯಕಾರಿ ಜಾಗದಿಂದ ತೆರವು ಮಾಡಲಾಗಿದೆ. ನಾವೀಗ ಎಲ್ಲರೂ ಸೇಫ್ ಆಗಿದ್ದೇವೆ, ಭಾರತೀಯ ನೌಕಾಪಡೆ ರಕ್ಷಣೆ ಒದಗಿಸಿದೆ. ನಮ್ಮ ಜೀವ ಪಾರು ಮಾಡಿದ ಕ್ಷಣ ಇದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ತಾಯ್ನಾಡು ತಲುಪುವ ನಿರೀಕ್ಷೆಯಿದೆ ಎಂದು ಅದರಲ್ಲಿರುವ ಮಂಗಳೂರಿನ ನಾವಿಕರೊಬ್ಬರು ತಿಳಿಸಿದ್ದಾರೆ. ಅಲ್ಲೀಗ ಇನ್ನೂ 20 ಭಾರತ ಮೂಲದ ಹಡಗುಗಳಿದ್ದು, ಗ್ರೀನ್ ಸಿಗ್ನಲ್ ಬರುವುದಕ್ಕಾಗಿ ಕಾಯುತ್ತಿವೆ ಎಂದವರು ಹೇಳಿದ್ದಾರೆ.
ಇದಕ್ಕೂ ಮುನ್ನ ಅವರಿದ್ದ ಜಾಗಕ್ಕಿಂತ 200 ಮೀಟರ್ ದೂರದಲ್ಲಿ ಮಿಸೈಲ್ ಸ್ಫೋಟ ಆಗಿದ್ದ ಅನುಭವ ಹೇಳಿಕೊಂಡಿದ್ದರು. ಮಧ್ಯ ಪ್ರಾಚ್ಯದ ಬಂದರು ಒಂದರಲ್ಲಿ ತೈಲ ಲೋಡಿಂಗ್ ಆಗುತ್ತಿದ್ದಾಗಲೇ 200 ಮೀಟರ್ ದೂರದಲ್ಲಿ ಡ್ರೋಣ್, ಮಿಸೈಲ್ ಸ್ಫೋಟ ಆಗಿತ್ತು. ನಾವು ಸ್ವಲ್ಪದರಲ್ಲಿಯೇ ಬಚಾವ್ ಆಗಿದ್ದೆವು. ಆದರೆ ನಾವು ಲೋಡಿಂಗನ್ನು ನಿಲ್ಲಿಸಿರಲಿಲ್ಲ. ನಂತರದ ಎರಡು ದಿನಗಳಲ್ಲಿ ಹೊರ್ಮುಜ್ ತಲುಪಿದ್ದು ಅಲ್ಲಿ ಹಡಗು ನಿಲ್ಲಿಸಲು ಸೂಚಿಸಿದ್ದರು ಎಂದು ಮಾಧ್ಯಮಕ್ಕೆ ತಿಳಿಸಿದ್ದರು. ಭದ್ರತಾ ಕಾರಣದಿಂದ ತಮ್ಮ ಮಾಹಿತಿಯನ್ನು ಹಂಚಿಕೊಂಡಿರಲಿಲ್ಲ.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm