ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am