ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm