ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm