ಬ್ರೇಕಿಂಗ್ ನ್ಯೂಸ್
28-03-26 09:08 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 28: ಕರಾವಳಿಯ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಕೆಲವು ಕಡೆ ಸಿಡಿಲು ಮಿಂಚು ಸಹಿತ ಅರ್ಧ ಗಂಟೆ ಮಳೆಯಾಗಿದ್ದು ತೀವ್ರ ಬಿಸಿಲಿನಿಂದ ಕಂಗೆಟ್ಟಿದ್ದ ಇಳೆಗೆ ಬೇಸಗೆ ಮಳೆ ಸ್ವಲ್ಪ ತಂಪು ನೀಡಿದೆ.
ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಸಿಡಿಲು ಮಿಂಚು ಜೋರಾಗಿಯೇ ಇತ್ತು. ಮಂಜೇಶ್ವರ ಭಾಗದಲ್ಲಿ ಸಂಜೆ ಆರು ಗಂಟೆ ವೇಳೆಗೆ ಅರ್ಧ ಗಂಟೆ ಉತ್ತಮ ಮಳೆಯಾಗಿದ್ದರೆ, ಪುತ್ತೂರು, ಸುಳ್ಯದಲ್ಲಿ ಸಾಧಾರಣ ಮಳೆಯಾಗಿದೆ. ಉಪ್ಪಿನಂಗಡಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮೂಡುಬಿದ್ರೆ ಭಾಗದಲ್ಲಿ ಮೋಡದ ವಾತಾವರಣ ಮತ್ತು ಸಿಡಿಲು ಮಿಂಚಿನ ಆರ್ಭಟ ಮಾತ್ರ ಇತ್ತು. ಮಳೆ ಹನಿ ಬೀಳಲಿಲ್ಲ.


ಇದೇ ವೇಳೆ, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳು ಮತ್ತು ಚಿಕ್ಕಮಗಳೂರು, ಹಾಸನ, ಕೊಡಗು ಭಾಗದಲ್ಲಿ ಮೂರು ದಿನಗಳ ಕಾಲ ಆಲಿಕಲ್ಲು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಶನಿವಾರ ಸಂಜೆ ವೇಳೆಗೆ ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗಿದೆ.
ಮಾರ್ಚ್ ತಿಂಗಳ ನಡುವಲ್ಲಿ ಭಾರೀ ಬಿಸಿಲಿನ ಕಾರಣ ಬೇಸಗೆಯಲ್ಲಿ ಮಳೆಯಾಗುವುದು ವಾಡಿಕೆ. ವಿಪರೀತ ಬಿಸಿಲಿನ ಕಾರಣ ಮಳೆಯಾಗಿದ್ದು ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನರು, ಇತರೇ ಜೀವಿಗಳಿಗೆ ಸ್ವಲ್ಪ ತಂಪು ನೀಡಿದೆ. ಕರಾವಳಿ ಭಾಗದಲ್ಲಿ ಹಗಲಿನ ವೇಳೆ 39-40 ಡಿಗ್ರಿ ತಾಪಮಾನವಿದ್ದು ಭಾರೀ ಸೆಕೆಯಿಂದಾಗಿ ಪರಿತಾಪ ಪಡುವಂತಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am