ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 04:34 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 03:48 pm
HK News Staffer
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm