ಬ್ರೇಕಿಂಗ್ ನ್ಯೂಸ್
30-03-26 02:06 pm Mangaluru Staffer ಕರಾವಳಿ
ಮಂಗಳೂರು, ಮಾರ್ಚ್ 30: ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಕೊರತೆಯಾಗಿದ್ದು ಸಕಾಲಕ್ಕೆ ಗ್ಯಾಸ್ ಸಿಗದೆ ಆಟೋ ಚಾಲಕರು ಫಿಲ್ಲಿಂಗ್ ಸ್ಟೇಶನ್ ಮುಂದೆ ಕ್ಯೂ ನಿಂತಿದ್ದಾರೆ. ನಗರದ ಬಲ್ಮಠದ ಗೋ ಗ್ಯಾಸ್ ಹೆಸರಿನ ಆಟೋ ಎಲ್ಪಿಜಿ ಫಿಲ್ಲಿಂಗ್ ಸ್ಟೇಷನ್ ಮುಂದೆ ಆಟೋ ಚಾಲಕರು ಕಿಮೀ ಉದ್ದಕ್ಕೂ ಕ್ಯೂ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಲು ಕಾರಣವಾಗಿದೆ.
ಗ್ಯಾಸ್ ಸ್ಟೇಶನ್ ಮುಂದೆ ಆಟೋಗಳು ಸಾಲುಗಟ್ಟಿದ್ದು ಯಾವಾಗ ಗ್ಯಾಸ್ ಸಿಗುತ್ತದೆ ಎಂಬ ಆತಂಕದಲ್ಲಿದ್ದಾರೆ. ಗ್ಯಾಸ್ ಸ್ಟೇಶನ್ ನಲ್ಲಿ ಫಿಲ್ಲಿಂಗ್ ಮಾಡುತ್ತಿದ್ದರೂ ಆಟೋ ಚಾಲಕರು ಗ್ಯಾಸ್ ಕೊರತೆ ಇದೆಯೆಂಬ ವದಂತಿಗೀಡಾಗಿದ್ದು ಸ್ಟೇಶನ್ ಮುಂದೆ ಸೇರಿದ್ದಾರೆ. ಪಂಪ್ ನಲ್ಲಿ ಗ್ಯಾಸ್ ಇದೆಯೆಂದು ಅಲ್ಲಿನ ಸಿಬಂದಿ ಹೇಳುತ್ತಿದ್ದಾರೆ. ಆಟೋ ಚಾಲಕರು ರಸ್ತೆಯಲ್ಲಿ ಸಾಲುಗಟ್ಟಿದ್ದರಿಂದ ಟ್ರಾಫಿಕ್ ತೊಂದರೆಯಾಗಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪರದಾಡುತ್ತಿದ್ದಾರೆ. ಎಸ್ ಸಿಎಸ್ ಆಸ್ಪತ್ರೆ ರಸ್ತೆಯ ಉದ್ದಕ್ಕೂ ಆಟೋಗಳು ಸಾಲುಗಟ್ಟಿ ನಿಂತಿವೆ.




ಇದೇ ವೇಳೆ, ಆಟೋ ಗ್ಯಾಸ್ ದರವು ಎಪ್ರಿಲ್ 1ರ ಬಳಿಕ ಏರಿಕೆಯಾಗುತ್ತದೆ ಎಂಬ ಸುದ್ದಿಯ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಶನ್ ಕಡೆಯಿಂದಲೇ ಕೃತಕ ಅಭಾವ ಸೃಷ್ಟಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಆಟೋ ಸಿಎನ್ ಜಿ ಸ್ಟೇಶನ್ ಹಲವು ಕಡೆ ಲಭ್ಯವಿದ್ದರೂ ಎಲ್ಪಿಜಿ ಸ್ಟೇಶನ್ ಹೆಚ್ಚಿಲ್ಲ. ಮಂಗಳೂರು ನಗರ ಒಳಭಾಗದಲ್ಲಿ ಬಲ್ಮಟದ ಈ ಸ್ಟೇಶನ್ ನಲ್ಲಿ ಮಾತ್ರ ಲಭ್ಯ ಇದೆ. ಹೀಗಾಗಿ ನಾಡಿದ್ದು ಬೆಲೆ ಏರುತ್ತದೆ ಮತ್ತು ಗ್ಯಾಸ್ ಕೊರತೆಯಾಗುತ್ತದೆ ಎಂಬ ವದಂತಿ ನಂಬಿ ಆಟೋ ಚಾಲಕರು ಸ್ಟೇಶನ್ ಮುಂದೆ ಸಾಲುಗಟ್ಟಿದ್ದಾರೆ. ಆದರೆ ರಾಜ್ಯ ಸರ್ಕಾರ ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಿಲ್ಲ, ಆಟೋ ಚಾಲಕರು ಕೂಡ ಗಾಬರಿಯಾಗಬೇಡಿ ಎಂದು ಕಿವಿಮಾತು ಹೇಳಿದೆ.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
30-03-26 02:06 pm
Mangaluru Staffer
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm