ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm