ಬ್ರೇಕಿಂಗ್ ನ್ಯೂಸ್
03-01-21 11:31 pm Mangaluru Correspondent ಕರಾವಳಿ
ಮಂಗಳೂರು, ಜ.3: ಮಂಗಳೂರು ನಗರಕ್ಕೆ ಆಗಮಿಸಿದ ನೂತನ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಕರ್ತವ್ಯ ಆರಂಭಿಸಿದ ಎರಡೇ ದಿನದಲ್ಲಿ ಪೊಲೀಸರಿಗೆ ಬಿಸಿ ಮುಟ್ಟಿಸುವ ಕೆಲಸ ಆರಂಭಿಸಿದ್ದಾರೆ.
ಮಂಗಳೂರಿನ ಬರ್ಕೆ ಮತ್ತು ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಲು ಸೂಚಿಸಿದ್ದಾರೆ. ರಾತ್ರಿ ವೇಳೆ ವಿನಾಕಾರಣ ರಸ್ತೆಯಲ್ಲಿ ಓಡಾಡುವುದು, ಬಾರ್, ಹೊಟೇಲ್ ಮತ್ತಿತರ ಸಾರ್ವಜನಿಕ ಪ್ರದೇಶಗಳಲ್ಲಿ ನಿಂತುಕೊಳ್ಳುವುದು, ವಾಹನಗಳಲ್ಲಿ ಕುಳಿತು ಮದ್ಯಪಾನ ಮಾಡುವುದನ್ನು ತಪ್ಪಿಸಲು ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ.


ಪಾರ್ಕ್, ಮೈದಾನ, ಬಸ್ ನಿಲ್ದಾಣಗಳಲ್ಲಿ ಟಾರ್ಗೆಟ್ ಇಟ್ಟುಕೊಂಡು ಈ ರೀತಿಯ ಆಪರೇಶನ್ ನಡೆಯಲಿದೆ. ಕಾರ್ಯಾಚರಣೆ ವೇಳೆ ಸಿಕ್ಕಿಬಿದ್ದವರು ಅಪರಾಧ ಹಿನ್ನೆಲೆ ಹೊಂದಿದ್ದರೆ ಅವರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಇಬ್ಬರು ಡಿಸಿಪಿ ಸೇರಿದಂತೆ ಎಸಿಪಿ, ಹತ್ತು ಇನ್ಸ್ ಪೆಕ್ಟರ್ ದರ್ಜೆಯ ಅಧಿಕಾರಿಗಳು ಮತ್ತು 50 ಮಂದಿ ಸಿಬಂದಿ ಇರಲಿದ್ದಾರೆ. ಆರಂಭಿಕವಾಗಿ ಎರಡು ಠಾಣೆ ವ್ಯಾಪ್ತಿಯಲ್ಲಿ ಈ ರೀತಿಯ ಕಾರ್ಯಾಚರಣೆ ನಡೆಯಲಿದ್ದು ಮುಂದಿನ ದಿನಗಳಲ್ಲಿ ಬೇರೆ ಠಾಣೆಗಳಿಗೂ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ಅಗತ್ಯ ಬಿದ್ದರೆ ತಾನು ಕೂಡ ಬರಲಿದ್ದೇನೆ ಎಂದಿದ್ದಾರೆ.
ಪೊಲೀಸರು, ಪೊಲೀಸ್ ವ್ಯವಸ್ಥೆ ಬಗ್ಗೆ ಅಪರಾಧಿಗಳಲ್ಲಿ ಭಯ ಮೂಡಿಸುವುದು, ಅಪರಾಧಿಗಳನ್ನು ಮಟ್ಟ ಹಾಕುವುದು ಇದರ ಉದ್ದೇಶ. ರಾತ್ರಿ ವೇಳೆ ರಾಜಾರೋಷವಾಗಿ ವರ್ತಿಸುವುದು, ಎಲ್ಲೆಂದರಲ್ಲಿ ಕುಡಿಯುವುದು ಇಂಥ ಕೃತ್ಯಗಳಿಂದ ಮತ್ತೊಂದು ರೀತಿಯ ಅಪರಾಧಗಳಿಗೆ ಪ್ರೇರಣೆ ಸಿಗುವುದು. ಇದಕ್ಕಾಗಿ ಆಪರೇಷನ್ ಸುರಕ್ಷಾ ಹೆಸರಿನಲ್ಲಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
New Mangalore Commissioner of Police Shashi Kumar has issued strict rules for drunkards and night wanderers just in two days of his posting in the city.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm