ಬ್ರೇಕಿಂಗ್ ನ್ಯೂಸ್
31-03-26 10:06 pm HK News Desk ಕರಾವಳಿ
ಕೊಡಗು, ಮಾರ್ಚ್ 31: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ಇದೀಗ ದೊಡ್ಡ ವಿವಾದಕ್ಕೆ ತಿರುಗಿದೆ. ಗ್ರಾಮದಲ್ಲಿ ನಡೆದ ಮದುವೆಯಲ್ಲಿ ದೈವ ಮತ್ತು ದೈವ ನರ್ತಕರಿಗೆ ಅವಮಾನ ಮಾಡಿದ ಆರೋಪದಲ್ಲಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಲವು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮುಸ್ಲಿಂ ಯುವಕನ ಮದುವೆ ಸಮಾರಂಭದ ವೇಳೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ವೇಷವನ್ನು ಹೋಲುವ ರೀತಿಯಲ್ಲಿ ಮದು ಮಗನಿಗೆ ವೇಷ ತೊಡಿಸಿ, ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಮದುಮಗ ಹಾಗೂ ಆತನ ಬೆಂಬಲಿಗರು ದೈವದ ವೇಷದಲ್ಲಿ ಅತಿರೇಕದ ಮತ್ತು ಅವಮಾನಕಾರಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ದೈವ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪೂರ್ವಜರ ನಂಬಿಕೆ, ಸಂಸ್ಕೃತಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆ ಮುಖಂಡರು ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಫೈಜಲ್, ಶಕೀರ್ ಹಾಗೂ ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮದುಮಗ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಯಾಚಿಸಿದ್ದಾನೆ. ಈ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಮದುವೆಯ ಬಳಿಕ ಖಾಸಗಿಯಾಗಿ ಮಾತನಾಡಿದ ಕೆಲವು ಮಾತುಗಳು ವೈರಲ್ ಆಗಿವೆ. ಇದರಿಂದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ, ನಾನು ಹೃದಯಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.
ಆದರೆ ಈ ಕ್ಷಮೆಯಾಚನೆಗೆ ತೃಪ್ತಿಪಡದ ದೈವಾರಾಧಕರ ಸಂಘ ಹಾಗೂ ಸ್ಥಳೀಯರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ಡಿವೈಎಸ್ಪಿಗೂ ದೂರು ಸಲ್ಲಿಸಲಾಗಿದ್ದು, ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
“ನಮ್ಮ ದೈವಗಳಿಗೆ ಮತ್ತೆ ಮತ್ತೆ ಅವಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ಕೇವಲ ಕ್ಷಮೆ ಕೇಳುವುದರಿಂದ ಸಮಸ್ಯೆ ಮುಗಿಯುವುದಿಲ್ಲ. ಇಂತಹ ಕೃತ್ಯಗಳಿಗೆ ತಕ್ಕ ಶಿಕ್ಷೆ ನೀಡದಿದ್ದರೆ ಮುಂದೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಕ್ರಮ ಜರುಗಿಸದಿದ್ದರೆ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಸಂಘದ ಪ್ರಮುಖರು ಎಚ್ಚರಿಸಿದ್ದಾರೆ.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm