ಬ್ರೇಕಿಂಗ್ ನ್ಯೂಸ್
31-03-26 10:06 pm HK News Desk ಕರಾವಳಿ
ಕೊಡಗು, ಮಾರ್ಚ್ 31: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ಇದೀಗ ದೊಡ್ಡ ವಿವಾದಕ್ಕೆ ತಿರುಗಿದೆ. ಗ್ರಾಮದಲ್ಲಿ ನಡೆದ ಮದುವೆಯಲ್ಲಿ ದೈವ ಮತ್ತು ದೈವ ನರ್ತಕರಿಗೆ ಅವಮಾನ ಮಾಡಿದ ಆರೋಪದಲ್ಲಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಲವು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮುಸ್ಲಿಂ ಯುವಕನ ಮದುವೆ ಸಮಾರಂಭದ ವೇಳೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ವೇಷವನ್ನು ಹೋಲುವ ರೀತಿಯಲ್ಲಿ ಮದು ಮಗನಿಗೆ ವೇಷ ತೊಡಿಸಿ, ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಮದುಮಗ ಹಾಗೂ ಆತನ ಬೆಂಬಲಿಗರು ದೈವದ ವೇಷದಲ್ಲಿ ಅತಿರೇಕದ ಮತ್ತು ಅವಮಾನಕಾರಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ದೈವ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪೂರ್ವಜರ ನಂಬಿಕೆ, ಸಂಸ್ಕೃತಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆ ಮುಖಂಡರು ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಫೈಜಲ್, ಶಕೀರ್ ಹಾಗೂ ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮದುಮಗ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಯಾಚಿಸಿದ್ದಾನೆ. ಈ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಮದುವೆಯ ಬಳಿಕ ಖಾಸಗಿಯಾಗಿ ಮಾತನಾಡಿದ ಕೆಲವು ಮಾತುಗಳು ವೈರಲ್ ಆಗಿವೆ. ಇದರಿಂದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ, ನಾನು ಹೃದಯಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.
ಆದರೆ ಈ ಕ್ಷಮೆಯಾಚನೆಗೆ ತೃಪ್ತಿಪಡದ ದೈವಾರಾಧಕರ ಸಂಘ ಹಾಗೂ ಸ್ಥಳೀಯರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ಡಿವೈಎಸ್ಪಿಗೂ ದೂರು ಸಲ್ಲಿಸಲಾಗಿದ್ದು, ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
“ನಮ್ಮ ದೈವಗಳಿಗೆ ಮತ್ತೆ ಮತ್ತೆ ಅವಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ಕೇವಲ ಕ್ಷಮೆ ಕೇಳುವುದರಿಂದ ಸಮಸ್ಯೆ ಮುಗಿಯುವುದಿಲ್ಲ. ಇಂತಹ ಕೃತ್ಯಗಳಿಗೆ ತಕ್ಕ ಶಿಕ್ಷೆ ನೀಡದಿದ್ದರೆ ಮುಂದೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಕ್ರಮ ಜರುಗಿಸದಿದ್ದರೆ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಸಂಘದ ಪ್ರಮುಖರು ಎಚ್ಚರಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am