ಬ್ರೇಕಿಂಗ್ ನ್ಯೂಸ್
31-03-26 10:06 pm HK News Desk ಕರಾವಳಿ
ಕೊಡಗು, ಮಾರ್ಚ್ 31: ಕೊಡಗು ಜಿಲ್ಲೆಯ ಎಮ್ಮೆಮಾಡು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದು ಇದೀಗ ದೊಡ್ಡ ವಿವಾದಕ್ಕೆ ತಿರುಗಿದೆ. ಗ್ರಾಮದಲ್ಲಿ ನಡೆದ ಮದುವೆಯಲ್ಲಿ ದೈವ ಮತ್ತು ದೈವ ನರ್ತಕರಿಗೆ ಅವಮಾನ ಮಾಡಿದ ಆರೋಪದಲ್ಲಿ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಲವು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಮುಸ್ಲಿಂ ಯುವಕನ ಮದುವೆ ಸಮಾರಂಭದ ವೇಳೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ವೇಷವನ್ನು ಹೋಲುವ ರೀತಿಯಲ್ಲಿ ಮದು ಮಗನಿಗೆ ವೇಷ ತೊಡಿಸಿ, ಮೆರವಣಿಗೆ ನಡೆಸಲಾಗಿದೆ. ಈ ವೇಳೆ ಮದುಮಗ ಹಾಗೂ ಆತನ ಬೆಂಬಲಿಗರು ದೈವದ ವೇಷದಲ್ಲಿ ಅತಿರೇಕದ ಮತ್ತು ಅವಮಾನಕಾರಿ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ, ದೈವ ಭಕ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪೂರ್ವಜರ ನಂಬಿಕೆ, ಸಂಸ್ಕೃತಿ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಘಟನೆ ಎಂದು ಆರೋಪಿಸಿ, ಹಿಂದೂ ಪರ ಸಂಘಟನೆ ಮುಖಂಡರು ನಾಪೋಕ್ಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಅಬ್ದುಲ್ ರಾಶಿದ್, ಹನೀಫ್, ಲತೀಫ್, ಮೊಹಮ್ಮದ್ ಫೈಜಲ್, ಶಕೀರ್ ಹಾಗೂ ಬಶೀರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇನ್ನೊಂದೆಡೆ ಘಟನೆಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮದುಮಗ ಫೈಜಲ್ ಸಾಮಾಜಿಕ ಜಾಲತಾಣದ ಮೂಲಕ ಕ್ಷಮೆ ಯಾಚಿಸಿದ್ದಾನೆ. ಈ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಮಾಡಿಲ್ಲ. ಮದುವೆಯ ಬಳಿಕ ಖಾಸಗಿಯಾಗಿ ಮಾತನಾಡಿದ ಕೆಲವು ಮಾತುಗಳು ವೈರಲ್ ಆಗಿವೆ. ಇದರಿಂದ ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ, ನಾನು ಹೃದಯಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ” ಎಂದಿದ್ದಾರೆ.
ಆದರೆ ಈ ಕ್ಷಮೆಯಾಚನೆಗೆ ತೃಪ್ತಿಪಡದ ದೈವಾರಾಧಕರ ಸಂಘ ಹಾಗೂ ಸ್ಥಳೀಯರು, ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮಡಿಕೇರಿ ಡಿವೈಎಸ್ಪಿಗೂ ದೂರು ಸಲ್ಲಿಸಲಾಗಿದ್ದು, ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿವೆ ಎಂಬ ಅಸಮಾಧಾನ ವ್ಯಕ್ತವಾಗಿದೆ.
“ನಮ್ಮ ದೈವಗಳಿಗೆ ಮತ್ತೆ ಮತ್ತೆ ಅವಮಾನ ಮಾಡಲಾಗುತ್ತಿದೆ. ಅಪಮಾನವಾದಾಗ ಕೇವಲ ಕ್ಷಮೆ ಕೇಳುವುದರಿಂದ ಸಮಸ್ಯೆ ಮುಗಿಯುವುದಿಲ್ಲ. ಇಂತಹ ಕೃತ್ಯಗಳಿಗೆ ತಕ್ಕ ಶಿಕ್ಷೆ ನೀಡದಿದ್ದರೆ ಮುಂದೆ ಇಂತಹ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ಕ್ರಮ ಜರುಗಿಸದಿದ್ದರೆ ತೀವ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆ” ಎಂದು ಸಂಘದ ಪ್ರಮುಖರು ಎಚ್ಚರಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm