ಬ್ರೇಕಿಂಗ್ ನ್ಯೂಸ್
06-04-26 07:43 pm HK News Staffer ಕರಾವಳಿ
ಉಡುಪಿ, ಏಪ್ರಿಲ್ 06: 'ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.
ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.
ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್
ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.
ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm