ಬ್ರೇಕಿಂಗ್ ನ್ಯೂಸ್
06-04-26 07:43 pm HK News Staffer ಕರಾವಳಿ
ಉಡುಪಿ, ಏಪ್ರಿಲ್ 06: 'ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.
ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.
ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್
ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.
ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am