ಬ್ರೇಕಿಂಗ್ ನ್ಯೂಸ್
06-04-26 07:43 pm HK News Staffer ಕರಾವಳಿ
ಉಡುಪಿ, ಏಪ್ರಿಲ್ 06: 'ಮುಳುಗುವವನಿಗೆ ಹುಲ್ಲುಕಡ್ಡಿಯೂ ಆಸರೆ’ ಎಂಬ ಗಾದೆ ಮಾತಿಗೆ ಜ್ವಲಂತ ಉದಾಹರಣೆ ಆಗಬಲ್ಲ ಅಪರೂಪದ ಘಟನೆ ಉಡುಪಿ ಜಿಲ್ಲೆಯ ಕೊಡವೂರಿನಲ್ಲಿ ನಡೆದಿದೆ. ಬಾವಿಗೆ ಬಿದ್ದು ಮೂರು ದಿನಗಳಿಂದ ನರಳಾಡುತ್ತಿದ್ದ ವೃದ್ಧನ ಜೀವವನ್ನು ಗ್ಯಾಸ್ ಸಿಲಿಂಡರ್ ಎತ್ತಿಕೊಂಡು ಬಂದಿದ್ದ ಸಿಬಂದಿ OTP ಕಾರಣಕ್ಕೆ ಹುಡುಕಾಡಿ ರಕ್ಷಿಸಿದ ಅಚ್ಚರಿಯ ಘಟನೆ ನಡೆದಿದೆ.
ಕೊಡವೂರು ಪ್ರದೇಶದ ಕಂಬ್ಲಕಟ್ಟದ ಮನೆಯೊಂದರಲ್ಲಿ ಒಬ್ಬರೇ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ತೋಟಕ್ಕೆ ನೀರು ಹಾಯಿಸಲು ಹೋಗಿದ್ದ ವೇಳೆ ಬಾವಿಗೆ ಬಿದ್ದಿದ್ದರು. ಬಾವಿಯಲ್ಲಿ ಅಳವಡಿಸಿದ್ದ ಪಂಪ್ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ತೆರಳಿದ್ದ ಅವರು, ಪೈಪ್ ಎಳೆಯುವ ವೇಳೆ ಹಗ್ಗ ತುಂಡಾಗಿ, ಸುಮಾರು 15–20 ಅಡಿ ಆಳದ ಬಾವಿಗೆ ಬಿದ್ದಿದ್ದಾರೆ. ಒಂಟಿಯಾಗಿ ವಾಸಿಸುತ್ತಿದ್ದ ಕಾರಣ, ಅವರ ಕೂಗು ಯಾರಿಗೂ ಕೇಳಿಸದೇ ಹೋಗಿದ್ದು, ಅವರು ಬಾವಿಯೊಳಗೆ ಪೈಪ್ ಹಿಡಿದು ಮೂರು ದಿನಗಳ ಕಾಲ ಜೀವ ಉಳಿಸಿಕೊಂಡಿದ್ದರು.
ಜೀವ ಉಳಿಸಿದ್ದು ಗ್ಯಾಸ್ ಸಿಲಿಂಡರ್
ಶ್ರೀನಿವಾಸ್ ಆಚಾರ್ಯರ ಜೀವ ಉಳಿಸಿದ್ದು ಒಂದು ಗ್ಯಾಸ್ ಸಿಲಿಂಡರ್ ಎಂದರೆ ಅಚ್ಚರಿ ಆಗಬಹುದು. ಶ್ರೀನಿವಾಸ್ ಅವರು ಸಿಂಗಲ್ ಗ್ಯಾಸ್ ಸಿಲಿಂಡರ್ ಹೊಂದಿದ್ದು ತಿಂಗಳು ತುಂಬುತ್ತಲೇ ಹೊಸ ಸಿಲಿಂಡರ್ಗೆ ಬುಕ್ ಮಾಡಿ ಪರಿಚಯದ ಗಣೇಶ್ ಎಂಬವರಿಂದ ಖಾಲಿ ಸಿಲಿಂಡರ್ ಪಡೆದಿದ್ದರು. ಈ ನಡುವೆ ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಮಾಡಿದ ಕಾರಣ OTP ಅಗತ್ಯವಿತ್ತು. ಗ್ಯಾಸ್ ಡೆಲಿವರಿ ವೇಳೆ ಸಿಬಂದಿ ಮನೆಯಲ್ಲಿ ಹುಡುಕಾಡಿದ್ದು ಯಾರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡು ಸ್ಥಳೀಯರಿಗೆ ಮಾಹಿತಿ ನೀಡಿದ್ದರು.
ಇದರಿಂದ ಅವರ ಪರಿಚಯದ ಗಣೇಶ್ ಹುಡುಕಾಟ ನಡೆಸಿದಾಗ, ತೋಟದ ಬಾವಿಯಲ್ಲಿ ಶ್ರೀನಿವಾಸ್ ಬಿದ್ದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಕಾರ್ಯಾಚರಣೆ ನಡೆಸಿ ವೃದ್ಧರನ್ನು ಸುರಕ್ಷಿತವಾಗಿ ಮೇಲಕ್ಕೆ ಎತ್ತಿದ್ದಾರೆ. ಸದ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸಿದೆ. ಬಾವಿಗೆ ಬಿದ್ದರೂ ಅದಕ್ಕೂ ಮೊದಲೇ ಗ್ಯಾಸ್ ಬುಕ್ಕಿಂಗ್ ಮಾಡಿದ್ದರಿಂದ ಸಿಬ್ಬಂದಿ ಬಂದು ಹುಡುಕಾಡಿದ್ದರಿಂದ ಕಾಕತಾಳೀಯ ಎನ್ನುವಂತೆ ಜೀವ ಉಳಿಸಲು ಕಾರಣವಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
20-09-26 08:59 pm
HK News Staffer
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm