ಬ್ರೇಕಿಂಗ್ ನ್ಯೂಸ್
06-04-26 07:58 pm HK News Staffer ಕರಾವಳಿ
ಬೆಳ್ತಂಗಡಿ, ಎಪ್ರಿಲ್ 6: ಇತ್ತೀಚೆಗೆ ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಿಂದಾಗಿ ತೀವ್ರ ಸುದ್ದಿಗೆ ಗ್ರಾಸವಾಗಿದ್ದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ಅಪರಿಚಿತ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಎಪ್ರಿಲ್ 6ರ ಬೆಳಗ್ಗೆ 10 ಗಂಟೆ ಸುಮಾರಿಗೆ ಶವ ಕಾಣಸಿಕ್ಕಿದ್ದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿದ್ದಾರೆ.
ಸುಮಾರು 40-50 ವರ್ಷ ಪ್ರಾಯದ ಪ್ಯಾಂಟ್, ಶರ್ಟ್ ಹಾಕಿರುವ ಗಂಡಸಿನ ಮೃತದೇಹವಾಗಿದ್ದು ಕೊಳೆತು ನಾರುವ ಸ್ಥಿತಿಯಲ್ಲಿತ್ತು. ಮೃತದೇಹವು ಎತ್ತರ 5.7 ಅಡಿ, ಸಾಧಾರಣ ಶರೀರವಾಗಿದ್ದು, ಕೊಳೆತಿರುವುದರಿಂದ ಯಾವುದೇ ಚಹರೆ ಗುರುತು ಪತ್ತೆಯಾಗಿಲ್ಲ. ಮೈಮೇಲೆ ಬಿಳಿ ಬಣ್ಣದ ಉದ್ದ ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಬಿಳಿ ಬಣ್ಣದ ಬನಿಯನ್, ಕಪ್ಪು ಬಣ್ಣದ ಒಳ ಚಡ್ಡಿ, ಎಡಗೈಯಲ್ಲಿ ಗೋಲ್ಡನ್ ಕಲರಿನ ವಾಚ್, ಎಡಕೈ ಉಗುಂರ ಬೆರಳಿನಲ್ಲಿ ತಿಳಿನೀಲಿ ಬಣ್ಣದ ಕಲ್ಲು ಇರುವ ಲೋಹದ ಉಂಗುರ ಧರಿಸಿದೆ.
ಶವ ಪೂರ್ತಿ ಕೊಳೆತು ಬಾತುಕೊಂಡಿದ್ದು ಹತ್ತು ದಿನಗಳ ಹಿಂದೆ ಸತ್ತಿರಬಹುದು ಎನ್ನುವ ಶಂಕೆಯಿದೆ. ಆತ್ಮಹತ್ಯೆಯೋ, ಯಾವ ರೀತಿಯಲ್ಲಿ ಸಾವು ಸಂಭವಿಸಿದೆ ಎನ್ನುವುದು ತಿಳಿದುಬಂದಿಲ್ಲ. ಧರ್ಮಸ್ಥಳ ಪೊಲೀಸರು ಪೋಸ್ಟ್ ಮಾರ್ಟಂ ನಡೆಸಲು ಶವವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸದ್ರಿ ವ್ಯಕ್ತಿಯ ವಾರೀಸುದಾರರು ಅಥವಾ ಸಂಬಂಧಿಕರು ಇದ್ದರೆ ಧರ್ಮಸ್ಥಳ ಠಾಣೆಗೆ ಸಂಪರ್ಕಿಸಲು ಪೊಲೀಸರು ತಿಳಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ ಬಂಗ್ಲೆಗುಡ್ಡೆ ಕಾಡಿನಲ್ಲಿ ಹಲವಾರು ಅಸ್ಥಿಪಂಜರಗಳು ಸಿಕ್ಕಿವೆ ಎನ್ನುವ ಗುಮಾನಿ ಹಬ್ಬಿತ್ತು. ನೂರಾರು ಶವ ಹೂತ ಪ್ರಕರಣ ಸಂಬಂಧಿಸಿ ರಚನೆಯಾಗಿದ್ದ ವಿಶೇಷ ತನಿಖಾ ತಂಡ ಕಾಡಿನಲ್ಲಿ ಶೋಧ ಕಾರ್ಯ ನಡೆಸಿತ್ತು. ಪುತ್ತೂರು ವಿಭಾಗಾಧಿಕಾರಿ ನೇತೃತ್ವದಲ್ಲಿ ಅಸ್ಥಿಗಳನ್ನು ಸಂಗ್ರಹಿಸಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಲಾಗಿತ್ತು. ಪ್ರಕರಣ ಕುರಿತಾಗಿ ಎಸ್ಐಟಿ ತಂಡವು ಕೋರ್ಟಿಗೆ ಪ್ರಾಥಮಿಕ ವರದಿಯನ್ನೂ ಸಲ್ಲಿಸಿತ್ತು. ಶವ ಹೂತ ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲವಾದರೂ ಈ ನಡುವೆ ಅದೇ ಜಾಗದಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಮತ್ತೆ ಸುದ್ದಿಗೆ ಗ್ರಾಸವಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm