ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm