ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am