ಬ್ರೇಕಿಂಗ್ ನ್ಯೂಸ್
10-04-26 10:12 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 10: ಸಂತ ಅಲೋಶಿಯಸ್ ಡೀಮ್ಡ್ ಯುನಿವರ್ಸಿಟಿಯ ಪ್ರೋ ಚಾನ್ಸಲರ್, ಸೈಂಟ್ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಮತ್ತು ಮಂಗಳೂರು ಜೆಸೂಟ್ ಎಜುಕೇಶನಲ್ ಸೊಸೈಟಿ ಇದರ ಉಪಾಧ್ಯಕ್ಷರಾಗಿದ್ದ ಫಾದರ್ ಮೆಲ್ವಿನ್ ಜೆ. ಪಿಂಟೋ(63) ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ಕೆಲವು ದಿನಗಳ ಹಿಂದೆ ಹಾರ್ಟ್ ಅಟ್ಯಾಕ್ ಆಗಿದ್ದ ಅವರಿಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲೇ ಶಿಕ್ಷಣ ಪೂರೈಸಿ ಇಂಗ್ಲಿಷ್ ಎಂಎ ಮಾಡಿದ್ದ ಮೆಲ್ವಿನ್ ಪಿಂಟೋ ಅವರು 1980ರಲ್ಲಿ ಜೆಸೂಟ್ ಆಗಿ ಸೇರ್ಪಡೆಯಾಗಿದ್ದರು. ಇದಲ್ಲದೆ, ಸೈಕಾಲಜಿಯಲ್ಲಿ ಡಿಪ್ಲೊಮಾ, ಸ್ಕೂಲ್ ಅಡ್ಮಿನಿಸ್ಟ್ರೇಶನ್ ವಿಷಯದಲ್ಲಿ ಡಿಪ್ಲೊಮಾ ಮಾಡಿದ್ದರು. 1997ರಲ್ಲಿ ಜೆಸೂಟ್ ಫಾದರ್ ಆಗಿದ್ದು ಮೊದಲಿಗೆ ಹಾಸನದಲ್ಲಿ ಸೈಂಟ್ ಜೋಸೆಫ್ ಹೈಯರ್ ಪ್ರೈಮರಿ ಸ್ಕೂಲ್ ನಲ್ಲಿ ಹೆಡ್ ಮಾಸ್ಟರ್ ಆಗಿದ್ದರು. ಆನಂತರ ಸೈಂಟ್ ಜೋಸೆಫ್ ಇಂಡಿಯನ್ ಪಿಯು ಕಾಲೇಜು ಸ್ಥಾಪಿಸಿ 2007ರ ತನಕ ಅದರ ಪ್ರಿನ್ಸಿಪಾಲ್ ಆಗಿದ್ದರು.
2007ರಿಂದ 11ರ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಹೈಸ್ಕೂಲಿನಲ್ಲಿ ಹೆಡ್ ಮಾಸ್ಟರ್ ಆಗಿದ್ದು, 2012ರಲ್ಲಿ ಮರಳಿ ಹಾಸನದ ಪಿಯು ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇರಿದ್ದರು. ಫಾದರ್ ಮೆಲ್ವಿನ್ ಅವರು ವ್ಯಾಟಿಕನ್ ಕಮ್ಯುನಿಕೇಶನ್ಸ್ ಮತ್ತು ರೇಡಿಯೋ ರೋಮ್ ನಲ್ಲಿ ಏಷ್ಯಾ ಮತ್ತು ಭಾರತೀಯ ಭಾಷೆಗಳ ಪ್ರತಿನಿಧಿಯಾಗಿಯೂ ಕೆಲಸ ಮಾಡಿದ್ದರು. 2017ರ ಬಳಿಕ ಮಂಗಳೂರಿನ ವೆಲೆನ್ಸಿಯಾದ ಫಾತಿಮಾ ರಿಟ್ರೀಟ್ ಹೌಸ್ ನಲ್ಲಿ ಎರಡು ವರ್ಷಗಳ ಕಾಲ ಮುಖ್ಯಸ್ಥರಾಗಿದ್ದರು. ಆನಂತರ ಧಾರವಾಡದ ವಿದ್ಯಾನಿಕೇತನದಲ್ಲಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಸಂತ ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ಆಗಿದ್ದುಕೊಂಡು ಹಲವು ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವಲ್ಲಿ ನೆರವಾಗಿದ್ದರು. ಆಮೂಲಕ ವಿದ್ಯಾರ್ಥಿಗಳು, ಅಲ್ಲಿನ ಶಿಕ್ಷಕ ವೃಂದಕ್ಕೂ ಜನಾನುರಾಗಿಯಾಗಿದ್ದರು.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm