ಬ್ರೇಕಿಂಗ್ ನ್ಯೂಸ್
12-04-26 09:05 pm Mangaluru Staffer ಕರಾವಳಿ
ಮಂಗಳೂರು, ಏ.12: ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಂತೂರು ತಾರಾಯಿತೋಟ ಎಂಬಲ್ಲಿ ನಡೆದಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಮಧ್ಯ ವಯಸ್ಕ ಛಾಯಾಗ್ರಾಹಕರಾಗಿದ್ದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಭೀಕರ ಘಟನೆಯ ದೃಶ್ಯವು ಟೆಂಪೋವೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಧರ್ಮಸ್ಥಳ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಮೃತ ಯುವಕ. ಈತ ಗುರುಪುರದಲ್ಲಿ ಚಿಪ್ಸ್ ತಯಾರಿ ಮಳಿಗೆಯಲ್ಲಿ ಕಾರ್ಮಿಕನಾಗಿದ್ದು, ಕೆಲಸ ಮುಗಿಸಿ ಜಪ್ಪಿನಮೊಗರಿನ ತನ್ನ ಬಾಡಿಗೆ ರೂಮ್ ಕಡೆ ತೆರಳುತ್ತಿದ್ದ ವೇಳೆ ನಂತೂರು ತಾರಾಯಿ ತೋಟ ಎಂಬಲ್ಲಿ ಅಪಘಾತ ನಡೆದಿದೆ.


ಘಟನೆಯಿಂದ ಸ್ಕೂಟರ್ ಚಾಲಕ ನಾಗುರಿ ನಿವಾಸಿ ಛಾಯಾಗ್ರಾಹಕ ಮೋಹನ್ ರಾಜ್ (64) ಅವರ ತಲೆಗೆ ಗಂಭೀರ ಗಾಯಗೊಂಡಿದ್ದು ಕಂಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಮೋಹನ್ ರಾಜ್ ಅವರು ಪದವಿನಂಗಡಿಯಲ್ಲಿ ಸ್ಟುಡಿಯೊ ಹೊಂದಿದ್ದು , ಅವರ ಮಗಳಿಗೆ ಇದೇ ಬರುವ ಮೇ 10 ರಂದು ಮದುವೆ ನಿಗದಿಯಾಗಿದ್ದು ಅದಕ್ಕೆ ತಯಾರಿ ನಡೆಸುತ್ತಿದ್ದರೆಂದು ತಿಳಿದುಬಂದಿದೆ. ಹೆದ್ದಾರಿಯಲ್ಲಿ ನಡೆದ ಈ ಭೀಕರ ಅಪಘಾತದ ದೃಶ್ಯವು ಉಡುಪಿಯಿಂದ ತೊಕ್ಕೊಟ್ಟು ಕಡೆಗೆ ಬರುತ್ತಿದ್ದ ಗಂಗಾಧರ್ ಅಂಬ್ಲಮೊಗರು ಎಂಬವರ ಟೆಂಪೋ ವಾಹನದ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ. ಅಪಘಾತ ನಡೆದ ತಕ್ಷಣವೇ ಗಂಗಾಧರ್ ಅವರು ಗಾಯಾಳು ಮೋಹನ್ ಅವರನ್ನ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಟಿಪ್ಪರ್ ಚಾಲಕನಿಗೆ ಅಪಘಾತದ ಬಗ್ಗೆ ಅರಿವೇ ಬಾರದೆ ಮುಂದಕ್ಕೆ ಸಾಗಿದ್ದು, ಗಂಗಾಧರ್ ಅವರ ಮಾಹಿತಿಯ ಮೇರೆಗೆ ಕದ್ರಿ ಸಂಚಾರಿ ಠಾಣೆ ಪೊಲೀಸರು ಟಿಪ್ಪರ್ ಮತ್ತು ಚಾಲಕನನ್ನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಮೃತ ಗೋಪಾಲಕೃಷ್ಣ ಅವರ ತಂದೆ ಮೃತರಾಗಿದ್ದು, ತಾಯಿ ಅನಾರೋಗ್ಯ ಪೀಡಿತರಾಗಿದ್ದಾರೆ. ಗೋಪಾಲಕೃಷ್ಣನನ್ನು ಮದುವೆ ಮಾಡಿಸಲು ಕುಟುಂಬಸ್ಥರು ವಧುವಿನ ಅನ್ವೇಷಣೆಯಲ್ಲಿ ತೊಡಗಿದ್ದರಂತೆ. ಆದರೆ ಗೋಪಾಲಕೃಷ್ಣ ಅವರ ದುಡುಕಿನ ಚಾಲನೆಯಿಂದಾಗಿ ಇದೀಗ ಎರಡು ಕುಟುಂಬಗಳು ಕಣ್ಣೀರಲ್ಲಿ ಮುಳುಗುವಂತಾಗಿದೆ. ಯುವಕ ಎಫ್ ಜೀ ಬೈಕ್ ಚಾಲನೆ ಮಾಡುತ್ತಿದ್ದು ಅತಿ ವೇಗ ಮತ್ತು ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬುದು ಕಂಡುಬರುತ್ತದೆ.
#Mangaluru Overspeeding kills 27-year-old biker after hitting a scooter and crashing into a tipper at #Nantoor. 64-year-old photographer Mohan Raj critically injured.
— Headline Karnataka (@hknewsonline) April 12, 2026
Horrific accident caught on #dashcam. #liveaccident #mangaloreaccident pic.twitter.com/tzvaTASJ7N
A tragic road accident caused by over-speeding and reckless overtaking claimed the life of a young bike rider and left a middle-aged photographer critically injured on Saturday night near Nantoor Tarayitota in Mangaluru. The deceased has been identified as Gopalakrishna (27), a resident of Dharmasthala Karyadka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am