ಬ್ರೇಕಿಂಗ್ ನ್ಯೂಸ್
13-04-26 11:39 pm Mangalore Correspondent ಕರಾವಳಿ
ಮಂಗಳೂರು, ಎಪ್ರಿಲ್ 13: ಮಹಿಳೆಯೊಬ್ಬರು ಕಾವೂರಿನ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಂದು ಆಟೋದಲ್ಲಿ ತನ್ನ ಮನೆಗೆ ತೆರಳುತ್ತಿದ್ದಾಗ ಚಿನ್ನಾಭರಣಗಳಿದ್ದ ಬ್ಯಾಗ್ ಕಳಕೊಂಡಿದ್ದು ಕಾವೂರು ಪೊಲೀಸರು ಕೆಲವೇ ಗಂಟೆಗಳಲ್ಲಿ ಆಟೋವನ್ನು ಪತ್ತೆಹಚ್ಚಿ ಬಂಗಾರ ಮರಳಿಸಿದ್ದಾರೆ.
ಕುಂಜತ್ತ್ ಬೈಲು ನಿವಾಸಿ ರೇಖಾ ತಾಜವ್ ಎಂಬವರು ಎಪ್ರಿಲ್ 7ರಂದು ಕಾವೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ತನ್ನ ಮನೆಯಾದ ಕುಂಜತ್ ಬೈಲಿಗೆ ಆಟೋ ರಿಕ್ಷಾದಲ್ಲಿ ಹೋಗಿದ್ದು ಮನೆಗೆ ತಲುಪಿದಾಗ ಅವರು ತನ್ನ ಬ್ಯಾಗ್ ಅನ್ನು ಆಟೋ ರಿಕ್ಷಾದಲ್ಲಿಯೇ ಮರೆತು ಇಳಿದಿದ್ದರು. ಬ್ಯಾಗ್ ನಲ್ಲಿ 4 ಚಿನ್ನದ ಉಂಗುರಗಳು ಮತ್ತು 1 ಚಿನ್ನದ ಪೆಂಡೆಂಟ್ ಹಾಗೂ 2 ವಾಚ್ ಇದ್ದ ವಿಷಯ ತಿಳಿದಾಗ ಆಟೋ ಹಿಂತಿರುಗಿ ಹೋಗಿತ್ತು.
ಇನ್ನೇನು ಮಾಡುವುದೆಂದು ತಿಳಿಯದೆ ಮಹಿಳೆ ಬಳಿಕ ಕಾವೂರು ಪೊಲೀಸ್ ಠಾಣೆಗೆ ಬಂದು ದೂರು ನೀಡಿ ಆಟೋ ಚಾಲಕನ ಬಗ್ಗೆ ಒಂದಷ್ಟು ವಿವರ ನೀಡಿದ್ದರು. ತಕ್ಷಣವೇ ಕಾವೂರು ಠಾಣಾ ಸಿಬ್ಬಂದಿಗಳು ಸದ್ರಿ ರಸ್ತೆಯಲ್ಲಿ ಸಿಸಿಟಿವಿ ಚೆಕ್ ಮಾಡಿದ್ದು ಆಟೋ ರಿಕ್ಷಾ ನಂಬರ್ ಪತ್ತೆ ಮಾಡಿದ್ದಾರೆ. ಬಳಿಕ ಆಟೋ ಚಾಲಕನನ್ನು ವಿಚಾರಿಸಿದಾಗ ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ.
ಆಟೋವನ್ನು ಪರಿಶೀಲನೆ ನಡೆಸಿದಾಗ ಡಿಕ್ಕಿಯಲ್ಲಿ ಮಹಿಳೆಯ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿ ಬಂಗಾರದ ಒಡವೆಗಳು ಹಾಗೇ ಇದ್ದವು. ಘಟನೆ ನಡೆದು 24 ಗಂಟೆ ಒಳಗೆ ಆಟೋ ಪತ್ತೆಹಚ್ಚಿದ ಪೊಲೀಸರು ಕಳೆದು ಹೋದ ಬ್ಯಾಗ್ ಸಮೇತ ಎಲ್ಲಾ ಬಂಗಾರವನ್ನು ಮಹಿಳೆಗೆ ಒಪ್ಪಿಸಿದ್ದಾರೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am