ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am