ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 07:47 pm
HK News Staffer
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm
ಮೂಡುಬಿದ್ರೆ ; ಕುಡಿದ ಮತ್ತಿನಲ್ಲಿ ಮಚ್ಚು ಹಿಡಿದು ಯು...
18-07-26 10:06 pm