ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm