ಬ್ರೇಕಿಂಗ್ ನ್ಯೂಸ್
18-04-26 11:31 pm HK News Desk ಕರಾವಳಿ
ಪುತ್ತೂರು, ಎಪ್ರಿಲ್ 18: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಬೆಡಿ ಉತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಸುಡುಮದ್ದಿನ ಬೆಂಕಿ ತಾಗಿ ಹಲವರು ಗಾಯಗೊಂಡ ಘಟನೆ ನಡೆದಿದ್ದು ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಜಾತ್ರೆ ನೋಡಲು ಬಂದಿದ್ದ ಉಡುಪಿ ಕುಂದಾಪುರ ನಿವಾಸಿ ಸುಮಂತ್ ಶೆಟ್ಟಿ (20) ಎಂಬವರ ದೂರಿನಂತೆ, ಪ್ರಕರಣ ದಾಖಲಾಗಿದೆ. ಎಪ್ರಿಲ್ 17ರಂದು ರಾತ್ರಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಜಾತ್ರೆಗೆ ಸ್ನೇಹಿತರೊಂದಿಗೆ ಬಂದಿದ್ದು, ಜಾತ್ರೆಯ ಗದ್ದೆಯಲ್ಲಿ ಏರ್ಪಡಿಸಿದ್ದ ಸುಡುಮದ್ದು ಪ್ರದರ್ಶನವನ್ನು ಸ್ನೇಹಿತರೊಂದಿಗೆ ನಿಂತು ವೀಕ್ಷಿಸುತ್ತಿದ್ದಾಗ, ಸುಡುಮದ್ದಿನ ಬೆಂಕಿ ಹರಡಿ ಸುಟ್ಟ ಗಾಯವಾಗಿದೆ. ಸುಮಂತ್ ಶೆಟ್ಟಿ ಹಾಗೂ ಭರತ್, ಕೌಶಿಕ್, ಸೌಮ್ಯ, ದೀಪಕ್ , ಯಶವಂತ್, ಮೋಹನ್ ಎಂಬವರ ಮೇಲೆ ಬೆಂಕಿ ಬಿದ್ದು ಸುಟ್ಟ ಗಾಯ ಆಗಿರುತ್ತದೆ. ಗಾಯಗೊಂಡ ಪಿರ್ಯಾದಿದಾರರನ್ನು ಅವರ ಸ್ನೇಹಿತರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿರುತ್ತಾರೆ.
ಈ ಬಗ್ಗೆ ಸುಡುಮದ್ದು ನಿರ್ವಹಣೆ ಮಾಡುವವರು ಹಾಗೂ ದೇವಸ್ಥಾನ ವ್ಯವಸ್ಥಾಪನ ಸಮಿತಿಯವರು ಮತ್ತು ಇತರರು ಸುಡುಮದ್ದು ಪ್ರದರ್ಶನದ ವೇಳೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆಯನ್ನು ಮಾಡಿಕೊಳ್ಳದೇ ನಿರ್ಲಕ್ಷ್ಯ ತೋರಿರುವುದಾಗಿ ಗಾಯಾಳು ಸುಮಂತ್ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಅ.ಕ್ರ:45/2026 ಕಲಂ: 288,125(a), 3(5), BNS 2023 ರಂತೆ ಪ್ರಕರಣ ದಾಖಲಿಸಲಾಗಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am