ಬ್ರೇಕಿಂಗ್ ನ್ಯೂಸ್
20-04-26 01:02 pm HK News Staffer ಕರಾವಳಿ
ಕಾರವಾರ , ಏಪ್ರಿಲ್ 20: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಮಹತ್ವದ ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ನಡೆದ ಫಿನಾಲೆಯಲ್ಲಿ ಸಾಧ್ವಿ 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ. ಗೋವಾ ಪ್ರತಿನಿಧಿಸಿದ್ದ ಸಾಧ್ವಿ ಸೈಲ್ ಅವರಿಗೆ ಮಾಜಿ ವಿಜೇತೆ ನಿಕಿತಾ ಪೋರ್ವಾಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ರಾಜನಂದಿನಿ ಮೊದಲ ರನ್ನರ್ ಅಪ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀತಿ ಅದ್ವೈತಾ ಎರಡನೇ ರನ್ನರ್ ಅಪ್ ಆಗಿದ್ದಾರೆ. ಕರ್ನಾಟಕದ ಖುಷಿ ರಮೇಶ್ ಟಾಪ್ 15ರಲ್ಲಿ ಸ್ಥಾನ ಪಡೆದಿದ್ದಾರೆ. ಗೆಲುವಿನ ಬಳಿಕ ಸಾಧ್ವಿ ತಂದೆ ಸತೀಶ್ ಸೈಲ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.
ಸಾಧ್ವಿ ತಮ್ಮ ಪ್ರತಿಕ್ರಿಯೆಯಲ್ಲಿ, “ಈ ಅವಕಾಶ ಸಿಕ್ಕಿದ್ದು ನನಗೆ ಅತ್ಯಂತ ಕೃತಜ್ಞತೆಯ ವಿಷಯ. ಇಲ್ಲಿ ಬಂದ ಪ್ರತಿಯೊಬ್ಬರೂ ವಿಜೇತರು. ಭಾರತವನ್ನು ಹೆಮ್ಮೆಪಡಿಸುವುದು ನನ್ನ ಗುರಿ” ಎಂದು ಹೇಳಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಪದವಿ ಪಡೆದಿರುವ ಅವರು ಸ್ಪರ್ಧೆಗೆ ಮೊದಲು 10 ಕೆಜಿ ತೂಕ ಇಳಿಸಿಕೊಂಡಿದ್ದರು. ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಅವರ ಹವ್ಯಾಸಗಳಾಗಿವೆ.
ಇದೀಗ ಸಾಧ್ವಿ ಸೈಲ್ 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಯಟ್ನಾಂನಲ್ಲಿ ನಡೆಯಲಿರುವ ಈ ಸ್ಪರ್ಧೆಯ ಫಿನಾಲೆ ಸೆಪ್ಟೆಂಬರ್ 5ರಂದು ನಡೆಯಲಿದೆ.
ಕಳೆದ ಆವೃತ್ತಿಯ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ನಿಕಿತಾ ಪೋರ್ವಾಲ್ ಅವರು 60ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಧರಿಸಿದ್ದರು. ಸದ್ಯ ಇವರು 2027ರ ಮಿಸ್ ವರ್ಲ್ಡ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದು, ಭಾರತ ಪ್ರತಿನಿಧಿಸಲು ತಯಾರಾಗುತ್ತಿದ್ದಾರೆ.


61ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ 3 ಸ್ಪರ್ಧಿಗಳು ತಲುಪಿದ್ದರು.ಅವರಲ್ಲಿ ಸಾದ್ವಿ ಸತೀಶ್ ಸೈಲ್ ವಿಜೇತರಾದರು. ಇವರು ಮಾಡೆಲ್ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಪ್ರತಿ ಯುವತಿಯಲ್ಲಿಯೂ ಒಂದು ಕನಸಿನ ಕಿರೀಟ ಅಡಗಿದೆ. ಅದನ್ನು ತಲುಪಲು ಧೈರ್ಯ, ಶ್ರಮ ಮತ್ತು ನಂಬಿಕೆ ಬೇಕು. ಅದಕ್ಕೆ ಈ ಸಾಧ್ವಿ ಸೈಲ್ ಸಾಧನೆ ಉತ್ತಮ ಉದಾಹರಣೆಯಾಗಿದೆ.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
20-04-26 01:02 pm
HK News Staffer
ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳು ಖಾಸಗಿ ತೆಕ್ಕ...
19-04-26 10:41 pm
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am